This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsEntertainment NewsLocal NewsNational NewsState News

45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ. ಮತ್ತು ಸಾಂಸ್ಕೃತಿಕ ವಿನಿಮಯ

45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ. ಮತ್ತು ಸಾಂಸ್ಕೃತಿಕ ವಿನಿಮಯ

ಲಕ್ಷದ್ವೀಪದಲ್ಲಿ ಬೆಳಗಿದ ಕರುನಾಡ ದೀಪ

ಲಕ್ಷದೀಪ,

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಇಂ) ಹಾಗೂ ಅಗಟ್ಟಿ ಜಾನಪದ ಕಲಾ ಸಂಘಟನೆಗಳ ಸಹಯೋಗದೊಂದಿಗೆ 45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಲಕ್ಷದ್ವೀಪದ ಅಗಟ್ಟಿಯ ಸಿಲ್ವರ್ ಜುಬಿಲಿ ಮ್ಯೂಸಿಯಂ ಸಭಾಂಗಣದಲ್ಲಿ ಆಗಷ್ಟ್10, 2024 ರಂದು ಆಯೋಜಿಸಲಾಗಿತ್ತು.

ನಾವು ವಿಶ್ವಾಸ ಸೌಹಾರ್ದ ಪ್ರಿಯರು ಲಾಂಛನದ ಪಲಕವನ್ನು ಅನಾವರಣಗೊಳಿಸುವ ಮೂಲಕ ನಿವೃತ್ತ ಸೇನಾಧಿಕಾರಿ ಕೆ. ಕೆ ಮಹಮದ್ ರೆಹಮಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಪ್ರೇಮ ನಮ್ಮ ಮೂಲ ಮಂತ್ರವಾಗಬೇಕು ನಾನು ಓರ್ವ ಸೈನಿಕನಾಗಿ 1972ರ ಭಾರತ ಪಾಕ್ ಯುದ್ಧದಲ್ಲಿ ಹೋರಾಡಿದ ಶೌರ್ಯದ ಆ ಕ್ಷಣಗಳು ನನ್ನನ್ನು ಇಂದಿಗೂ ರೋಮಾಂಚನಗೊಳಿಸುತ್ತವೆ ಎಂದರು.

ವಿಶೇಷ ಆಮಂತ್ರಿತರಾಗಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜರ್ಮನಿಯ ಕನ್ಸಲ್ಟಿಂಗ್ ಆರ್ಕಿಟೆಕ್ಟ್ ರೋಸಾಲ್ಡ್ ಮೋಸ್ಲೆ ಮಾತನಾಡಿ, ರಾಜಕೀಯ ಭಿನ್ನ ನಿಲುನಿಂದಾಗಿ ನಿರ್ಮಾಣಗೊಂಡಿದ್ದ ಬರ್ಲಿನ್ ಗೋಡೆ ಸ್ನೇಹ, ಪ್ರೀತಿ ಬಾಂಧವ್ಯದ ಮುಂದೆ ಹೆಚ್ಚು ಕಾಲ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸೌಹಾರ್ದತೆ ಅದನ್ನು ಅತ್ಯಲ್ಪ ಕಾಲದಲ್ಲಿ ತೆರವುಗೊಳಿಸುವಂತೆ ಮಾಡಿತು ಎಂದರು.

ವಿಶ್ವದ ತುಂಬಾ ಶಾಂತಿ ಸಂದೇಶ ಬಿತ್ತುವುದು ಈ ಸಮಾರಂಭದ ಮೂಲ ಉದ್ದೇಶವಾಗಿದೆ. ಆದಿ ಕವಿ ಪಂಪ ಸಾರಿದ ಮಾನವ ಕುಲಂ ಒಂದೇ ವಲಂ ಸಾರ್ವಕಾಲಿಕ ಸತ್ಯವಾಗಿಸುವತ್ತಾ ನಾವು ಸಾಗೋಣ
ಸಕಲ ಜೀವಾತ್ಮಗಳಿಗೆ ಲೇಸನ್ನೇ ಬಯಸುವುದು ಬಸವಣ್ಣನವರ ಉದಾತ್ತ ಸಮಾಜದ ಪರಿಕಲ್ಪನೆ. ಯುದ್ಧ ವಿಮುಕ್ತ ಜಗತ್ತನ್ನು ಕಾಣುವ ಹಂಬಲ ಪ್ರತಿಯೊಬ್ಬರ ಹೃದಯದಿಂದ ಮೂಡಿಬರಲಿ ಎಂದು ಮಹಾಲಿಂಗಪುರದ ಕೆ. ಎಲ್. ಇ. ಕನ್ನಡ ವಿಭಾಗ ಮುಖ್ಯಸ್ಥ ಪ್ರೊ. ಅಶೋಕ್ ನರೋಡೆ ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿ ಮೈಸೂರಿನ ಕ್ರೆಡಿಟ್ ಐ. ಮ್ಯಾನೇಜಿಂಗ್ ಟ್ರಸ್ಟಿ ಡಾ. ಎಂ. ಪಿ. ವರ್ಷ ಅವರು ಮಾತನಾಡಿ, ಲಕ್ಷದೀಪ ಜಗತ್ತಿನ ಸುಂದರ ತಾಣಗಳಲ್ಲಿ ಒಂದು. ಇದರ ಪ್ರಾಕೃತಿಕ ಸೌಂದರ್ಯ ಜಗತ್ತಿನಾದ್ಯಂತ ಇರುವ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ಭೂಲೋಕದ ನಂದನವಾಗಲಿದೆ. ಎಂದರು.

ಐಸಿಎಫ್‌ಸಿಐ ಅಧ್ಯಕ್ಷ ಕೆ. ಪಿ. ಮಂಜುನಾಥ್ ಸಾಗರ್ ಮಾತನಾಡಿ, ಸಾಂಸ್ಕೃತಿಕ ವಿನಿಮಯದಂತಹ ಕಾರ್ಯಕ್ರಮಗಳು ದೇಶ, ಭಾಷೆ. ಮತ್ತು ಸಮುದಾಯಗಳ ನಡುವೆ ಸಾಮರಸ್ಯ ಮೂಡಿಸುವಲ್ಲಿ ಯಶಸ್ಸು ನೀಡುತ್ತವೆ, ಆದ್ದರಿಂದಲೇ ನಾವು ವಿಶ್ವದಾದ್ಯಂತ ವಿವಿಧ ದೇಶಗಳಲ್ಲಿ 45 ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ ಎಂದರು.
ಇಂಡಿಯಾ ಮಾಸ್ಟರ್ ಅಥ್ಲೆಟಿಕ್ ಫೆಡರೇಶನ್ನಿನ ಅಧ್ಯಕ್ಷ ಡಾ. ಕೆ. ಬಿ. ನಾಗೂರ್, ಕನ್ನಡ ಚಲನಚಿತ್ರ ನಿರ್ಮಾಪಕ ಶಂಕ್ರೇಗೌಡ ಮೈಸೂರು,
ಮೈಸೂರಿನ ನಿವೃತ್ತ ಜಿಲ್ಲಾಧಿಕಾರಿ ಡಾ. ಡಿ. ಎಸ್. ವಿಶ್ವನಾಥ್ ಐಎಎಸ್ ಮತ್ತು ಕರ್ನಾಟಕ ಜಾನಪದ ಕಲಾವಿದರು ಒಕ್ಕೂಟದ ಅಧ್ಯಕ್ಷ ಕೆ. ನಾಗರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳ ಸಾಧಕರಾದ ಡಾ. ಆಂಜನೇಯ ರಾಯಚೂರು, ಗೋನಾ ಸ್ವಾಮಿ ಬೆಂಗಳೂರು, ಚಿತ್ರಾ ಮೈಸೂರು, ಡಾ. ಬಿ ಎನ್ ಹೊರಪೇಟಿ ಮತ್ತು ಪ್ರಿಯದರ್ಶಿನಿ ಮುಂಡರಗಿಮಠ್ ಇವರಿಗೆ ಗೌರವ ಪ್ರಶಸ್ತಿ ನೀಡಲಾಯಿತು.

ಅಂತರಾಷ್ಟ್ರೀಯ ಗಾಯಕ ಗೋನಾ ಸ್ವಾಮಿ ಮತ್ತು ಪುಷ್ಪ ಆರಾಧ್ಯ, ಅಗಟ್ಟಿ ಗಾಯಕರಾದ ರಜಾಕ್ ಮತ್ತು ಶಹರ್ಬಾನು ಅವರಿಂದ ರಸ ಮಂಜರಿ ಕಾರ್ಯಕ್ರಮ, ಶಿವಮೊಗ್ಗ ಜಿಲ್ಲೆ ಗೌತಮಪುರದ ಜಾನಪದ ಕಲಾವಿದರಾದ ಬೆಳ್ಳಿಯಪ್ಪ ಬಂಗಾರಪ್ಪ ಮತ್ತು ಶೋಭಿ ಕುಮಾರ್ ರವರಿಂದ ಡೊಳ್ಳುಕುಣಿತ. ಖ್ಯಾತ ಹಾಸ್ಯ ಮತ್ತು ಮಿಮಿಕ್ರಿ ಕಲಾವಿದ ಮಾದೇವ ಸತ್ತಿಗೇರಿ ಅವರಿಂದ ನಗೆ ಹೊನಲು, ಖ್ಯಾತ ಛಾಯಾಚಿತ್ರಗ್ರಾಹಕ ಸತೀಶ್ ಮುರಾಲ್ ಅರಿಂದ ಛಾಯಾಚಿತ್ರ, ಅನ್ಸಿಯ ಆಯೆಷಾ ತಂಡದಿಂದ ನೃತ್ಯ. ಸಭಾ ಮತ್ತು ತಂಡದಿಂದ ಮಕ್ಕಳ ನೃತ್ಯ, ಅಗಟ್ಟಿ ಜನಪದ ಕಲಾವಿದರಿಂದ ಪರಚು ಕಳಿ ಮತ್ತು ಉಳಕ್ಕ ಮಟ್ಟು ಜಾನಪದ ನೃತ್ಯಗಳು. ವೀಕ್ಷಕರ ಮನಸೂರೆಗೊಂಡವು.

";