This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education NewsLocal NewsNational NewsState News

500 ಸರಕಾರಿ ಶಾಲೆಗಳ ಅಭಿವೃದ್ದಿ : ಸಚಿವ ಮಧು ಬಂಗಾರಪ್ಪ *ಹೊರಟ್ಟಿ ಪಬ್ಲಿಕ್ ಶಾಲೆಗೆ ಭೇಟಿ, ವೀಕ್ಷಣೆ | ದೇಶದ ಆಸ್ತಿ, ಮಕ್ಕಳ ಕಲಿಕೆಯಲ್ಲಿದೆ

<span class=500 ಸರಕಾರಿ ಶಾಲೆಗಳ ಅಭಿವೃದ್ದಿ : ಸಚಿವ ಮಧು ಬಂಗಾರಪ್ಪ *ಹೊರಟ್ಟಿ ಪಬ್ಲಿಕ್ ಶಾಲೆಗೆ ಭೇಟಿ, ವೀಕ್ಷಣೆ | ದೇಶದ ಆಸ್ತಿ, ಮಕ್ಕಳ ಕಲಿಕೆಯಲ್ಲಿದೆ" title="500 ಸರಕಾರಿ ಶಾಲೆಗಳ ಅಭಿವೃದ್ದಿ : ಸಚಿವ ಮಧು ಬಂಗಾರಪ್ಪ *ಹೊರಟ್ಟಿ ಪಬ್ಲಿಕ್ ಶಾಲೆಗೆ ಭೇಟಿ, ವೀಕ್ಷಣೆ | ದೇಶದ ಆಸ್ತಿ, ಮಕ್ಕಳ ಕಲಿಕೆಯಲ್ಲಿದೆ" decoding="async" srcset="https://nimmasuddi.com/whirtaxi/2023/12/IMG-20231212-WA0040.jpg?v=1702386329 1025w, https://nimmasuddi.com/whirtaxi/2023/12/IMG-20231212-WA0040-300x169.jpg?v=1702386329 300w, https://nimmasuddi.com/whirtaxi/2023/12/IMG-20231212-WA0040-768x433.jpg?v=1702386329 768w" sizes="(max-width: 1025px) 100vw, 1025px" />

ಬಾಗಲಕೋಟೆ:

ರಾಜ್ಯದಲ್ಲಿ ಮುಂದಿನ ವರ್ಷ 500 ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಮುಧೋಳ ತಾಲೂಕಿನ ಯಡಹಳ್ಳಿಯ ಶಿವಲಿಂಗಪ್ಪ ಬಸಪ್ಪ ಹೊರಟ್ಟಿ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿ ವೀಕ್ಷಣೆ ಶಾಲಾ ವತಿಯಿಂದ ಸನ್ಮಾನ ಸ್ಮೀಕರಿಸಿ ಮಾತನಾಡಿದ ಅವರು ದೇಶದ ಆಸ್ತಿ ಮಕ್ಕಳ ಕಲಿಕೆಯಲ್ಲಿದ್ದು, ಮೊದಲ ಹಂತದಲ್ಲಿ 500 ಶಾಲೆಗಳನ್ನು ತೆಗೆದುಕೊಳ್ಳಲಾಗಿತ್ತಿದೆ. ಅದಕ್ಕಾಗಿ ರಾಜ್ಯಕ್ಕೆ ಮಾದರಿಯಾಗಿರುವ ಯಡಹಳ್ಳಿಯ ಹೊರಟ್ಟಿ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ್ದು, ಇಲ್ಲಿಯ ಸೌಲಭ್ಯಗಳನ್ನು ವೀಕ್ಷಣೆ ಮಾಡಲು ಆಗಮಿಸಿದ್ದೇನೆ ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‍ಕೆಜಿಯಿಂದ ಹಿಡಿದು ಪಿಯುಸಿವರೆಗೆ ಸ್ಮಾರ್ಟ ಕ್ಲಾಸ್‍ನಿಂದ ಹಿಡದು ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತಿದೆ. ಖಾಸಗಿ ಶಾಲೆ ಮೀರಿಸುವ ರೀತಿಯಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದೆ. ಸುಸಜ್ಜಿತ ಪ್ರಯೋಗಾಲಯ, ಆಟವಾಡಲು ಮೈದಾನ ಸೇರಿದಂತೆ ಕಲಿಕೆಗೆ ಬೇಕಾಗುವ ಸೌಲಭ್ಯಗಳ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ 500 ಶಾಲೆಗಳನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ಮುಂದಿನ ಮೂರು ವರ್ಷಗಳ ನಂತರ 2 ಗ್ರಾಮ ಪಂಚಾಯತಿಗೆ ಒಂದರಂತೆ 3 ಸಾವಿರ ಸರಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉದ್ದೇಶ ಸರಕಾರ ಹೊಂದಿದೆ ಎಂದರು.

ಹಿಂದಿನ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಸೇರಿದಂತೆ ಅನೇಕರು ಸರಕಾರಿ ಶಾಲೆಯಲ್ಲಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡಿದ್ದಾರೆ. ದೇಶದ ಆಸ್ತಿ ಮಕ್ಕಳ ಕಲಿಕೆಯಲ್ಲಿ ಇದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಎಲ್ಲ ಮಕ್ಕಳು ಶಾಲೆಗೆ ಬರಬೇಕು. ಮಕ್ಕಳು ಶಾಲೆಗೆ ಬರುವಂತಹ ವ್ಯವಸ್ಥೆ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ. ಪಬ್ಲಿಕ್ ಶಾಲೆ ಪರಿವರ್ತನೆಗೆ ಸಭಾಪತಿಯವರ ಹೊರಟ್ಟಿಯವರ ಮಾರ್ಗದರ್ಶ ನಮಗೆ ಅಗತ್ಯವಾಗಿದೆ. ಯಡಹಳ್ಳಿ ಮಾದರಿ ಶಾಲೆಗೆ ನನ್ನ ವ್ಯಯಕ್ತಿಕವಾಗಿ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದರಲ್ಲದೇ ಇನ್ನೀತರ ಸಹಕಾರ ಸಹ ನೀಡಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ ಮಾತನಾಡಿ ಈ ಭಾಗದ ಮಕ್ಕಳು ನಿಜವಾಗಿಯೂ ಭಾಗ್ಯವಂತರು. ಸಭಾಪತಿ ಬಸವರಾಜ ಹೊರಟ್ಟಿಯವರು ತಾವು ಹುಟ್ಟಿದ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಶಿಕ್ಷಣ ಸಂಸ್ಥೆ ಕಟ್ಟಿರುವುದನ್ನು ಕಂಡು ಧನ್ಯವಾದಗಳನ್ನು ಅರ್ಪಿಸಿದರು. ಮಕ್ಕಳಲ್ಲಿ ಶಕ್ತಿ ಇರುತ್ತದೆ. ಶಿಕ್ಷಣ ಕೊಡುವ ಮೂಲಕ ಆ ಶಕ್ತಿಯಿಂದ ಕೆಲಸ ಮಾಡಿಸಿ ಅವರನ್ನು ಹೊರತರುವ ಕೆಲಸವಾಗಬೇಕು. 24 ಗಂಟೆಗಳ ಸಮಯದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗುವದಿಲ್ಲ. ಸಮಯದ ಸದುಪಯೋಗ ಮುಖ್ಯವಾಗಿದೆ ಎಂದರು.

ಇನ್ನೋರ್ವ ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ ಮಾತನಾಡಿ, ಯಡಹಳ್ಳಿಯಲ್ಲಿ ಸರಕಾರಿ ಶಾಲೆ ಈ ರೀತಿ ಇರುವುದು ಹೆಮ್ಮೆಯ ವಿಷಯ. ಮಕ್ಕಳ ಓದಿನ ಜೊತೆಗೆ ಸಂಸ್ಕಾರವು ಮುಖ್ಯವಾಗಿದೆ. ಮನೆ, ಸಮಾಜ, ದೇಶದ ಬಗ್ಗೆ ವಿಚಾರ ಮಾಡುವಂತಾಗಬೇಕು. ನಾವು ಏನು ಮಾಡಬೇಕು ಎಂಬುದು ನಮ್ಮ ಮನಸ್ಸಿಗೆ ಬರಬೇಕು. ಸಭಾಪತಿ ಹೊರಟ್ಟಿ ಅವರು ಮಾದರಿ ಶಾಲೆಯನ್ನಾಗಿ ಮಾಡಿದ್ದಾರೆ. ವಿದ್ಯಾರ್ಥಿಗಳು ಚೆನ್ನಾಗಿ ಕಲಿತು ಅವರ ಹೆಸರು ತರಬೇಕು ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಿಗೆ ನರ್ಸರಿಯಿಂದ ಪದವಿವರೆಗೆ ಶಿಕ್ಷಣ ನೀಡುವ ಉದ್ದೇಶದಿಂದ ಮಾದರಿ ಯಾಗುವ ನಿಟ್ಟಿನಲ್ಲಿ ಶಾಲೆಯನ್ನು ಅಭಿವೃದ್ದಿಪಡಿಸಲಾಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೆಕ ವಸತಿ ನಿಲಯ, ಹೌಟೆಕ್ ಶೌಚಾಲಯ ನಿರ್ಮಿಸಲಾಗಿದೆ. ಇಲ್ಲಿಯ ಶಿಕ್ಷಕರು ಸಹ ಶಾಲಾ ಅವಧಿ ಬಿಟ್ಟು ಹೊರತುಪಡಿಸಿ ಉಳಿದ ಅವಧಿಯಲ್ಲಿಯೂ ಪಾಠ ಮಾಡುತ್ತಿದ್ದಾರೆ. ಇದರಿಂದ ಉತ್ತಮ ಪಬ್ಲಿಕ ಶಾಲೆಯಾಗಿ ಹೊರಹೊಮ್ಮಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಪದವಿ ಪೂರ್ವ ಶಿಕ್ಷಣ‌ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಮುಧೋಳ ತಹಶೀಲ್ದಾರ ವಿನೋದ ಹತ್ನಳ್ಳಿ, ಪಬ್ಲಿಕ್ ಶಾಲೆಯ ಪ್ರಾಂಶುಪಾಲ ವಿ.ಪಿ.ಪೆಟ್ಲೂರ, ಉಪಪ್ರಾಚಾರ್ಯ ರಾಜಶೇಖರ ಹಿರೇಮಠ ಸೇರಿದಂತೆ ಇತರರು ಇದ್ದರು.
ಛಾಯಾಚಿತ್ರ ಲಗತ್ತಿಸಿದೆ.