This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime NewsNational NewsPolitics NewsState News

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ಬಾಗಲಕೋಟೆ : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಇಂದು (ಆಗಸ್ಟ್ 28) ಬೆಳಗ್ಗೆ ಯಲ್ಲಪ್ಪ‌ ಹೆಗಡೆ ಬೀಳಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮುಧೋಳ ತಾಲೂಕಿನ ಇಂಗಳಗಿ ಕ್ರಾಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬಂದ ಐವರು ಅಪರಿಚಿತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಯಲ್ಲಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮುಧೋಳದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

Kichcha Sudeep: K46 ಸಿನಿಮಾ ಕ್ಲೈಮ್ಯಾಕ್ಸ್‌ಗೆ ಜಬರ್ದಸ್ತ್ ಬಾಡಿ ಬೆಳೆಸಿದ ಸುದೀಪ್;‌ ಕಿಚ್ಚನ ಲುಕ್‌ಗೆ ಫ್ಯಾನ್ಸ್‌ ಫಿದಾ

 

ನಿರಾಣಿ-ಹೆಗಡೆ ಕಿತ್ತಾಟ : ಈ ಬಾರಿಯ ವಿಧಾನಸಭಾ ಚುನಾವಣೆಯ ವೇಳೆ ತನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಮುರುಗೇಶ್ ನಿರಾಣಿ ಯಲ್ಲಪ್ಪ ಹೆಗಡೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. 5 ಕೋಟಿ ರೂಪಾಯಿ ಪರಿಹಾರ ಕೋರಿ ಲೀಗಲ್ ನೋಟಿಸ್ ಕಳಿಸಿದ್ದರು.

ನಿರಾಣಿ ಪರಿಹಾರ ಕೇಳಿದ್ದಕ್ಕೆ ಭಿಕ್ಷಾಟಣೆ ಮೂಲಕ ಹಣ ಸಂಗ್ರಹಿಸಿ ನೀಡಲು ಯಲ್ಲಪ್ಪ ಮುಂದಾಗಿದ್ದರು. ಬೀಳಗಿ ಪಟ್ಟಣದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಭಿಕ್ಷಾಟಣೆ ನಡೆಸಲು ತೀರ್ಮಾನಿಸಿದ್ದರು. ಅದಕ್ಕೂ ಮುನ್ನ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆದಿದೆ. ಯಾರು, ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ

";