This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ ನಿರ್ಧಾರ : ಎಡಿಸಿ

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ ನಿರ್ಧಾರ : ಎಡಿಸಿ

ಬಾಗಲಕೋಟೆ:

: ಜಿಲ್ಲೆಯಲ್ಲಿ ಅಕ್ಟೋಬರ 28 ರಂದು ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ ಜಿಲ್ಲಾಡಳಿತದಿಂದ ವಾಲ್ಮೀಕ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿದ್ದು, ತಂಡಗಳನ್ನು ಆಹ್ವಾನಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು. ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.

ವೇದಿಕೆ ಕಾರ್ಯಕ್ರಮ ನವನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವೇದಿಕೆ ಸಿದ್ದತೆ, ಅಲಂಕಾರ ಮಾಡಲು ಕ್ರಮವಹಿಸಲು ತಿಳಿಸಿದರು. ಶಿಷ್ಠಾಚಾರ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಕಾನೂನು ವ್ಯವಸ್ಥೆ ಕಾಪಾಡಲು ಪೊಲೀಸ್ ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಾಗುವುದು. ಅಲ್ಲದೇ ಶಾಲಾ, ಕಾಲೇಜುಗಳಲ್ಲಿ ವಾಲ್ಮೀಕಿ ಅವರ ಕುರಿತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದೆಂದು ತಿಳಿಸಿದರು.

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದು ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಮೆರವಣಿಗೆ ಮಾರ್ಗವನ್ನು ಸ್ವಚ್ಚಗೊಳಿಸಲು ನಗರಸಭೆಗೆ ತಿಳಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಕೃಷಿ ಜಂಟಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ ಸೇರಿದಂತೆ ಸಮುದಾಯದ ಮುಖಂಡರಾದ ದ್ಯಾಮಣ್ಣ ಗಾಳಿ, ಆರ್.ಜಿ.ಸನ್ನಿ, ಲಕ್ಷ್ಮಣ ಮಾಳಗಿ, ಕೃಷ್ಣಾ ಪಾಟೀಲ, ನಿಂಗಪ್ಪ ಕ್ಯಾದಿಗ್ಗೇರಿ, ಡಿ.ಎಂ.ನಾಯಕ, ಶಂಭುಗೌಡ ಪಾಟೀಲ, ಹನಮಂತ ಡೋಣಿ, ಚಂದ್ರ ತಳವಾರ ಹಾಗೂ ಇತರರು ಉಪಸ್ಥಿತರಿದ್ದರು.

";