This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಬಾಗಲಕೋಟೆಯಲ್ಲಿ ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಬಾಗಲಕೋಟೆಯಲ್ಲಿ ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಬಾಗಲಕೋಟೆ: ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ‌ ಮಾಡಿಸಿದ‌ ಮಗ. ಮಾಂತೇಶ್ ಮರಡಿಮಠ ಕೊಲೆ‌ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಸುತ್ತಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿದ್ದು, ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದು, ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ‌ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ ಎಂದು ತಿಳಿಸಿದರು.

ಸುಫಾರಿ ಪಡೆದ ‌ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ‌ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ‌‌ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮತ್ತು ಪ್ರಕರಣ ದಾಖಲಿಸಿಕೊಂಡರು.

ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ ಆರೋಪಿಗಳಾದ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";