This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ರಾಜ್ಯದ 33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಜಮಾ – ಕಂದಾಯ ಸಚಿವ ಕೃಷ್ಣ ಬೈರೇಗೌಡ

ರಾಜ್ಯದ 33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಜಮಾ – ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬರ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ಕೋಟಿ ರೂ. ಒದಗಿಸಲಾಗಿದ್ದು, 33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ” 1.6 ಲಕ್ಷ ರೈತರ ಬ್ಯಾಂಕ್‌ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ರೈತರ ಖಾತೆಗೂ ಹಣ ಬಿಡುಗಡೆ ಮಾಡಲಾಗುತ್ತದೆ,” ಎಂದು ತಿಳಿಸಿದರು.

ಅರ್ಹರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲು ಸೂಚಿಸಲಾಗಿದ್ದು, ಪಟ್ಟಿ ಪ್ರಕಟಿಸಲಾಗಿದ್ದು, ರೈತರು ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿಗಳ ಖಾತೆಗೆ 870 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಈ ಕಾರ್ಯಪಡೆಗಳಿಂದ ಈವರೆಗೆ 431 ಸಭೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೂ ಟಾಸ್ಕ್‌ಫೋರ್ಸ್‌ ಸಮಿತಿಗಳಿಂದ 236 ಸಭೆಗಳಾಗಿವೆ. 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ 46 ವಾರ್ಡ್‌ಗಳಲ್ಲಿ ಟ್ಯಾಂಕರ್‌ನಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆ,” ಎಂದರು.

";