This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗೆ ಇಲ್ಲ – ಸಿಎಂ ಸಿದ್ದರಾಮಯ್ಯ

ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ ಬಿಜೆಪಿಗೆ ಇಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ಹೇಳಿಕೆ ನೀಡಿದ್ದು ಸಾಕಷ್ಟು ವಿವಾದ ಸೃಷ್ಟಿಸಿದ್ದು, ಸಂಸದರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಅನಂತ್ ಕುಮಾರ್ ಹೆಗಡೆ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್​ಎಸ್​ಎಸ್ ಬೆಂಬಲದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು, ತಾಕತ್ ಬಿಜೆಪಿಗೆ ಇಲ್ಲ ಎಂದು ಕಿಡಿಕಾರಿದರು.

ಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್​ಎಸ್​ಎಸ್ ನಾಯಕರು ಹೇಳಿದ್ದು, ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್​ಎಸ್​ಎಸ್​. ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ, ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ. ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ.

ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ. ಇವರಿಗೆ RSS ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಕತ್ ಇಲ್ಲ ಅಷ್ಟೆ ಎಂದರು.

ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು. ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ. ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ. ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದಹೆಗಡೆ ಈಗ ಹೇಳಿರುವುದನ್ನೇ ಹಿಂದೆ ಕಾಲಕಾಲಕ್ಕೆ ಆರ್​ಎಸ್​ಎಸ್ ನಾಯಕರು ಹೇಳಿದ್ದರು

. ಹೆಗಡೆ ಒಂದು ಮುಖವಾಡ ಅಷ್ಟೆ, ನಿಜವಾದ ಮುಖ ಆರ್​ಎಸ್​ಎಸ್​. ಬೆಂಬಲ ಇರುವುದರಿಂದ ಬಿಜೆಪಿಯನ್ನೇ ಯಾಕೆ, ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೆಗಡೆ ಅವರು ಲೆಕ್ಕಕ್ಕಿಟ್ಟಿಲ್ಲ. ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ. ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ. ಇವರಿಗೆ RSS ಬೆಂಬಲದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಕತ್ ಇಲ್ಲ ಅಷ್ಟೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರ ಮುಂದೆ ಈಗ ಇರುವುದು ಎರಡೇ ಆಯ್ಕೆ. ಒಂದೋ ಹೆಗಡೆಯನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಬೇಕು. ಇಲ್ಲವೇ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ಘೋಷಿಸಬೇಕು. ನೋಡೋಣ ಇದೇ ವಿಷಯದ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಲಿ. ಅನಂತಕುಮಾರ ಹೆಗಡೆ ನಿರಂತರವಾಗಿ ಸಂವಿಧಾನದ ವಿರುದ್ಧ ಮಾತ್ರ ಹೇಳಿಕೆ ನೀಡಿದ್ದಲ್ಲ ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಹೇಳಿದ್ದಾರೆ. ದಲಿತರನ್ನು ನಾಯಿಗಳು ಎಂದು ದೂಷಿಸಿದ್ದಾರೆ. ಮನುಸ್ಮೃತಿಯನ್ನು ಬಹಿರಂಗವಾಗಿ ಸಮರ್ಥಿಸಿದ್ದಾರೆ ಎಂದು ಸೂಚಿಸಿದರು.

Nimma Suddi
";