This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

National News

ಅನಂತಕುಮಾರ್​ ಹೆಗಡೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ, ಅವರ ವಿರುದ್ಧ ಪಕ್ಷ ಕ್ರಮಕೈಗೊಳ್ಳಲಿದೆ: ಆರ್ ಅಶೋಕ್

ಅನಂತಕುಮಾರ್​ ಹೆಗಡೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ, ಅವರ ವಿರುದ್ಧ ಪಕ್ಷ ಕ್ರಮಕೈಗೊಳ್ಳಲಿದೆ: ಆರ್ ಅಶೋಕ್

ನವದೆಹಲಿ: ಸಂವಿಧಾನ ಬದಲಾವಣೆ ವಿಚಾರವಾಗಿ ಬಿಜೆಪಿಯ ಉತ್ತರ ಕನ್ನಡ ಸಂಸದ ಅನಂತಕುಮಾರ್​ ಹೆಗಡೆ ನೀಡಿರುವ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕರ್ನಾಟಕ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

ದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಹೇಳಿದ್ದು, ನಾವು ಸಂವಿಧಾನವನ್ನು ಗೌರವಿಸುತ್ತೇವೆ. ಅನಂತಕುಮಾರ್​ ಹೆಗಡೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ. ಅವರ ವಿರುದ್ಧ ಪಕ್ಷ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಯಾಗಿರುವ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ಕೆಆರ್‌ಎಸ್ ಬರಿದು ಮಾಡಿದ್ದು, ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಪಕ್ಷ ಆಡಳಿತದಲ್ಲಿದೆ ಎಂಬ ಕಾರಣಕ್ಕೆ ತಮಿಳುನಾಡಿಗೆ ಬೇಕಾಬಿಟ್ಟಿ ನೀರು ಹರಿಸಿದ್ದಾರೆ.

ಇದರಿಂದ ಈಗ ಬೆಂಗಳೂರಿನಲ್ಲಿ ನೀರಿನ ಕೊರತೆ ಸೃಷ್ಟಿಯಾಗಿದೆ. ನೀರಿನ ಕೊರತೆ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಕೊರತೆ ಇಲ್ಲ ಎನ್ನುವುದಾದರೆ ಹೆಚ್ಚು ನೀರು ಪಂಪ್ ಮಾಡಲಿ. ನೀರು ಇದ್ದರೆ ಬೆಂಗಳೂರಿಗೆ ನೀರು ಕೊಡಿ ಎಂದು ಸವಾಲೆಸೆದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಕೇಂದ್ರದ ನಾಯಕರು ನಮ್ಮ ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ಮೋದಿ ಅವರು ಸಭೆಯಲ್ಲಿದ್ದ ಕಾರಣ ಇದು ಅಂತಿಮ ಸಭೆ ನಡೆಯಲಿದೆ. 28 ಕ್ಷೇತ್ರಗಳ ಬಗ್ಗೆಯೂ ಚರ್ಚೆಯಾಗಿದೆ ಎಂದರು.

Nimma Suddi
";