This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

National News

ಇಂಡಿಯಾ ಒಕ್ಕೂಟದಲ್ಲಿರುವ ಯಾವ ಪಕ್ಷವೂ ಕೂಡ ಕಾಂಗ್ರೆಸ್​ನ ಪರವಾಗಿ ನಿಲ್ಲಲು ಸಿದ್ಧವಿಲ್ಲ: ಬಿಜೆಪಿ

ಇಂಡಿಯಾ ಒಕ್ಕೂಟದಲ್ಲಿರುವ ಯಾವ ಪಕ್ಷವೂ ಕೂಡ ಕಾಂಗ್ರೆಸ್​ನ ಪರವಾಗಿ ನಿಲ್ಲಲು ಸಿದ್ಧವಿಲ್ಲ: ಬಿಜೆಪಿ

ಕಾಂಗ್ರೆಸ್ ಜತೆ ನಿಲ್ಲಲು ಯಾರೂ ಸಿದ್ಧರಿಲ್ಲ ಎಂದು ಬಿಜೆಪಿ ಹೇಳಿದ್ದು, ಮುಂಬೈನಲ್ಲಿ ನಡೆದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೊಡೋ ನ್ಯಾಯ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಇಂಡಿಯಾ ಒಕ್ಕೂಟದಲ್ಲಿರುವ ಯಾವ ಪಕ್ಷವೂ ಕೂಡ ಕಾಂಗ್ರೆಸ್​ನ ಪರವಾಗಿ ನಿಲ್ಲಲು ಸಿದ್ಧವಿಲ್ಲ, ಅಮೇಥಿ, ರಾಯ್​ ಬರೇಲಿಯಲ್ಲಿ ಸೋಲುವ ಭಯದಲ್ಲಿದೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಬಿಜೆಪಿ ವಕ್ತಾರ ರಾಕೇಶ್​ ತ್ರಿಪಾಠಿ ಹೇಳಿದ್ದಾರೆ. ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾದಲ್ಲಿರುವ ಪಕ್ಷಗಳು ಆಗಾಗ ಕಾಂಗ್ರೆಸ್​ನ್ನು ಅವಮಾನಿಸುತ್ತಿದೆ. ಈ ಒಕ್ಕೂಟದಲ್ಲಿ ಕಾಂಗ್ರೆಸ್​ ಅತಿದೊಡ್ಡ ಪಕ್ಷವಾಗಿದೆ. ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಲು ಎಲ್ಲಾ ಪ್ರತಿಪಕ್ಷಗಳು ಕಟ್ಟಿಕೊಂಡ ಒಕ್ಕೂಟ ಇದಾಗಿದೆ.

ಎಸ್​ಪಿ 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್​ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಮುಂಬರುವ ಲೋಕಸಭೆ ಚುನಾವಣೆಗೆ ಮೀರತ್ ಕ್ಷೇತ್ರದಿಂದ ಸಮಾಜವಾದಿ ಪಕ್ಷವು ವಕೀಲ ಭಾನು ಪ್ರತಾಪ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಿದೆ. ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಸನಾತನ ಸಂಸ್ಥೆಯ ವಿರುದ್ಧ ಮಾತನಾಡುತ್ತಿರುವುದು ಕಂಡು ಬಂದಿದೆ. ಇದೀಗ ಭಾರತೀಯ ಜನತಾ ಪಕ್ಷ ಈ ಬಗ್ಗೆ ಎಸ್‌ಪಿ ವಿರುದ್ಧ ಪ್ರಶ್ನೆ ಎತ್ತಿದೆ.

ನಿತೀಶ್​ ಕುಮಾರ್​ ಹಾಗೂ ಆರ್​ಎಲ್​ಡಿ ಇಂಡಿಯಾ ಮೈತ್ರಿ ತೊರೆದಿದ್ದಾರೆ. ಮಮತಾ ಬ್ಯಾನರ್ಜಿ ಕೂಡ ಅವರೊಂದಿಗಿಲ್ಲ, ಈಗ ಅಖಿಲೇಶ್​ ಯಾದವ್ ಕೂಡ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಯಾರೂ ಕಾಂಗ್ರೆಸ್​ನೊಂದಿಗೆ ನಿಲ್ಲಲು ಬಯಸುವುದಿಲ್ಲ. ಫೆಬ್ರವರಿ 25 ರಂದು ಆಗ್ರಾದಲ್ಲಿ ಭಾರತ್ ಜೋಡೊ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೊಲೆಯ ಕ್ಷಣದಲ್ಲಿ ರಾಹುಲ್ ಗಾಂಧಿಯೊಂದಿಗೆ ಅಖಿಲೇಶ್​ ಯಾದವ್ ಸೇರಿಕೊಂಡಿದ್ದರು.

ಸಮಾಜವಾದಿ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ತನ್ನ ಸನಾತನ ವಿರೋಧಿ ಸಂಪ್ರದಾಯವನ್ನು ಉಳಿಸಿಕೊಂಡಿದೆ ಎಂದು ಬಿಜೆಪಿ ಹೇಳಿದೆ. 2024ರ ಲೋಕಸಭೆ ಚುನಾವಣೆಗೆ ಮತ ಹಾಕುವ ಮುನ್ನ , ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಬೇಕೋ ಅಥವಾ ತುಷ್ಟೀಕರಣ ರಾಜಕಾರಣ ಮಾಡುವ ಪಕ್ಷವನ್ನು ಆಯ್ಕೆ ಮಾಡಿಕೊಳ್ಳುತ್ತೀರೋ ಅದು ನಿಮಗೆ ಬಿಟ್ಟಿದ್ದು ಎಂದು ಬಿಜೆಪಿ ಹೇಳಿದೆ.

Nimma Suddi
";