This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ಅನಗತ್ಯವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಅನಗತ್ಯವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಧಾರವಾಡ: ಕೋಲಾರದಲ್ಲಿ ಸಚಿವ ಮುನಿಯಪ್ಪ ಅಳಿಯಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಪಕ್ಷದ ಐವರು ಶಾಸಕರು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರರ ನಡುವೆ ಜಗಳವಿದ್ದು, ಅವರಿಂದ ಸರ್ಕಾರ ಸರಿಯಾಗಿ ನಡೆಸಲು ಆಗುತ್ತಿಲ್ಲ. ಅನಗತ್ಯವಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಶೇ 75ರಷ್ಟು ಎಸ್​​ಡಿಆರ್ ಎಫ್ ಹಣವನ್ನು ಭಾರತ ಸರ್ಕಾರ ಕೊಡುತ್ತದೆ. ಆ ಹಣ ಹಂಚಿಕೆಯಾಗಿ ಬಿಡುಗಡೆ ಆಗಿಲ್ಲ ಎಂದರು.

ಅದನ್ನು ಬಿಟ್ಟು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಯುಪಿಎ ಸರ್ಕಾರಕ್ಕಿಂತ ಹೆಚ್ಚು ಅನುದಾನ ನಾವು ಕೊಡುತ್ತಿದ್ದೇವೆ. ಇಷ್ಟೆಲ್ಲ ಇದ್ದರು ಸುಳ್ಳು ಸುದ್ದಿ ಹೇಳಿ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಈ ಸರ್ಕಾರ ಇದ್ದರೆಷ್ಟು ಬಿಟ್ಟರೆಷ್ಟು ಎಂಬ ಭಾವನೆ ಜನರಲ್ಲಿ ಬಂದಿದೆ ಎಂದು ಜೋಶಿ ಹೇಳಿದರು.

ಜನಸಾಮಾನ್ಯರಿಗೆ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷದ ಶಾಸಕರಿಗೇ ಸರ್ಕಾರದ ಬಗ್ಗೆ ರೋಸಿ ಹೋಗಿದೆ. ಸಿದ್ದರಾಮಯ್ಯ ಒಬ್ಬ ಅಶಕ್ತ ಮುಖ್ಯಮಂತ್ರಿ ಎಂದು ಅವರು ವಾಗ್ದಾಳಿ ನಡೆಸಿದರು.ಎಲೆಕ್ಟ್ರೋರಲ್ ಬಾಂಡ್ ವಿಚಾರವಾಗಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಅಧಿಕಾರದಲ್ಲಿತ್ತು. ಆಗ ಎಲ್ಲ ನಗದು ರೂಪದಲ್ಲಿಯೇ ವ್ಯವಹಾರ ನಡೆಯುತ್ತಿತ್ತು ಎಂದು ತಿಳಿಸಿದರು.

ಆಗ ಪ್ರಾಮಾಣಿಕವಾಗಿ ಚುನಾವಣೆ ನಡೆಸುತ್ತಿದ್ದರಾ? ನಾವು ಕಪ್ಪು ಹಣವನ್ನಾದರೂ ಚುನಾವಣೆಯಿಂದ ದೂರ ಇಟ್ಟಿದ್ದೇವೆ. ಬಾಂಡ್ ಕೊಡಲು ಚೆಕ್ ಮೂಲಕ ಹಣ ಕೊಡಬೇಕಾಗುತ್ತದೆ. ಇದು ನಮ್ಮ ಮೊದಲ ಹೆಜ್ಜೆಯಾಗಿತ್ತು. ಈಗ ಸುಪ್ರೀಂಕೋರ್ಟ್ ಹೇಳಿದ್ದನ್ನು ಮಾನ್ಯ ಮಾಡುತ್ತೇವೆ. ಕಾಂಗ್ರೆಸ್‌ಗೆ 1600 ಕೋಟಿ ರೂ. ಬಂದಿದೆಯಲ್ಲ, ಅದು ಎಲ್ಲಿಂದ ಬಂದಿದೆ? ಅವರು ತಗೊಂಡ್ರೆ ಸಾಚಾಗಳಾ? ನಾವು ಮಾದರಿಯಲ್ಲಿ ಸುಧಾರಣೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ಹೇಳಿದ್ದನ್ನು ಪಾಲನೆ ಮಾಡಿಕೊಂಡು ಹೋಗುತ್ತೇವೆ ಎಂದು ಜೋಶಿ ಹೇಳಿದರು.

Nimma Suddi
";