ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಪರ ಇಂದು ತಾಲ್ಲೂಕಿನ ಹಲವಾರು ಕಡೆಗಳಲ್ಲಿ ಪ್ರಚಾರ ಮಾಡಿದ ಹಿರಿಯ ಬಿಜೆಪಿ ನಾಯಕ ಆರ್ ಅಶೋಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಮೂರನೇಯವರು ಯಾರೂ ಮಾಡಬೇಕಿಲ್ಲ ಎಂದು ಸೂಚಿಸಿದರು.
ಆ ಪಕ್ಷದ ನಾಯಕರೇ ಆ ಕೆಲಸ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ ಅದನ್ನು ಪಡೆಯಲು ಡಿಕೆ ಶಿವಕುಮಾರ್ ಮಾಟ ಮಂತ್ರ ಮಾಡಿಸುತ್ತಿದ್ದಾರೆ, ಇವರ ಜಗಳದ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಅಬ್ಬೇಪಾರಿಗಳಂತಾಗಿದ್ದಾರೆ ಎಂದು ಅಶೋಕ ಹೇಳಿದರು.
ಜನರಿಗೂ ಇದು ಗೊತ್ತಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಅವರು ಇಲ್ಲಿನ ಮನೆಮಗ ಸುಧಾಕರ್ ಅವರನ್ನು ಅಯ್ಕೆ ಮಾಡಲು ತೀರ್ಮಾನ ಮಾಡಿಕೊಂಡಿದ್ದಾರೆ ಎಂದು ಅಶೋಕ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎಲ್ಲ ನಾಯಕರ ಆಶೀರ್ವಾದ ಸುಧಾಕರ್ ಮೇಲಿದೆ ಎಂದ ಅಶೋಕ, ಭಾಷಣ ಮಾಡುವುದು ಕೂಡ ಗೊತ್ತಿರದ ಕಾಂಗ್ರೆಸ್ ಪಕ್ಷದ ರಕ್ಷಾರಾಮಯ್ಯಗೆ ಯಾರೂ ವೋಟು ಮಾಡಲ್ಲ ಅಂತ ಹೇಳಿದರು.