This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

International NewsNational NewsPolitics News

ಹಣದ ಕೊರತೆಯಿರುವ ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಅಂದ್ರೆ ನಾವು ತೊಡಿಸ್ತೇವೆ:ಮೋದಿ

ಹಣದ ಕೊರತೆಯಿರುವ ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಅಂದ್ರೆ ನಾವು ತೊಡಿಸ್ತೇವೆ:ಮೋದಿ

ಪಾಟ್ನಾ: ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಹೇಳಿಕೆ ಬಗ್ಗೆ ಇಂಡಿಯಾ ಬಣ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಣದ ಕೊರತೆಯಿರುವ ಪಾಕಿಸ್ತಾನ ಬಳೆ ತೊಟ್ಟಿಲ್ಲ ಅಂದರೆ ಭಾರತ ಅವರಿಗೆ ಬಳೆ ತೊಡಿಸುತ್ತದೆ ಎಂದು ಹೇಳಿದರು.

.ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವ ರಾಜನಾಥ್ ಸಿಂಗ್ ಅವರ ಪ್ರತಿಜ್ಞೆಗೆ ಪ್ರತಿಕ್ರಿಯಿಸಿದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ನೆರೆಯ ದೇಶವು ಬಳೆ ತೊಟ್ಟುಕೊಂಡಿಲ್ಲ, ಭಾರತಕ್ಕೆ ಹಾನಿ ಮಾಡುವ ಪರಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಹೇಳಿದ್ದರು.

“ಪಾಕಿಸ್ತಾನ್ ನೆ ಚೂಡಿಯಾಂ ನಹೀ ಪೆಹನಿ ಹೈ, ಅರೆ ಭಾಯಿ ಪೆಹನಾ ದೇಂಗೆ. ಅಬ್ ಉನ್ಕೋ ಆಟಾ ಭಿ ಚಾಹಿಯೇ, ಉನ್ಕೇ ಪಾಸ್ ಬಿಜ್ಲಿ ಭಿ ನಹೀ ಹೈ, ಅಬ್ ಹಮೇನ್ ಮಾಲೂಮ್ ಪಡಾ ಉನ್ಕೇ ಪಾಸ್ ಚೂಡಿಯನ್ ಭೀ ನಹೀ ಹೈ (ಪಾಕಿಸ್ತಾನ ಬಳೆಗಳನ್ನು ತೊಟ್ಟಿಲ್ಲ ಅಂದ್ರೆ ನಾವು ಅವರಿಗೆ ಬಳೆ ತೊಡಿಸುತ್ತೇವೆ ಎಂದರು.

ಅವರಿಗೆ ಈಗ ಗೋಧಿಯೂ ಬೇಕಿದೆ. ಅವರಿಗೆ ವಿದ್ಯುತ್ ಇಲ್ಲ. ಈಗ ಅವರಿಗೆ ಬಳೆಗಳ ಕೊರತೆಯಿದೆ ಎಂದು ನನಗೆ ಗೊತ್ತಾಯಿತು)”ಎಂದು ಬಿಹಾರದ ಮುಜಾಫರ್‌ಪುರದಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, ಫಾರೂಕ್ ಅಬ್ದುಲ್ಲಾ ಅಥವಾ ಅಯ್ಯರ್ ಹೆಸರನ್ನು ಉಲ್ಲೇಖಿಸದೆ ವ್ಯಂಗ್ಯವಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";