This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

National NewsState News

ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಪ್ರಸ್ತುತ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಮುಗಿಯುತ್ತಿದ್ದಂತೆ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಮತ್ತಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸರ್ಕಾರಿ ಶಾಲಾ ಕಾಲೇಜುಗಳನ್ನು ಸಶಕ್ತಗೊಳಿಸುವಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿರುವ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಸೂಚಿಸಿ, ನೇಮಕಾತಿ ಪ್ರಕ್ರಿಯೆ ನಡೆಸಿದ್ದ 13 ಸಾವಿರ ಶಿಕ್ಷಕರು ಹುದ್ದೆಗಳಿಗೆ ನೇಮಕ ಆದೇಶ ನೀಡಲಾಗಿದೆ, ಅವರಲ್ಲಿ ಈಗಾಗಲೇ 12 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ. ಖಾಸಗಿ ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ನೀತಿ ಸಂಹಿತೆ ಕೊನೆಗೊಂಡ ಬಳಿಕ ಪ್ರಕ್ರಿಯೆ ಆರಂಭಿಸಲಾಗುವುದು. ಮುಖ್ಯ ಮಂತ್ರಿಗಳು ಈ ಬಗ್ಗೆ ಆಸಕ್ತಿವಹಿಸಿದ್ದು, ಸರ್ಕಾರಿ ಶಾಲೆಗಳಿಗೆ ಸಿಬ್ಬಂದಿ ಮತ್ತು ಮೂಲ ಸೌಕರ್ಯ ನೀಡಲಾಗುವುದು ಎಂದಿದ್ದಾರೆ. ಯಾವ ಹಂತದ ಶಿಕ್ಷಕರನ್ನು ಎಷ್ಟೆಷ್ಟು ಭರ್ತಿ ಮಾಡಲಾಗುತ್ತದೆ ಎಂದು ಸ್ಪಷ್ಟವಾದ ಮಾಹಿತಿ ನೀಡಿಲ್ಲ.

ಯಾವ್ಯಾವ ಹಂತದಲ್ಲಿ ಎಷ್ಟು ಶಿಕ್ಷಕರ ಕೊರತೆ?
ಪ್ರಾಥಮಿಕ ಶಾಲಾ ಶಿಕ್ಷಕರು – 46,000 ಕ್ಕೂ ಹೆಚ್ಚು ಎನ್ನಲಾಗಿದೆ.
ಪ್ರೌಢ ಶಾಲಾ ಶಿಕ್ಷಕರು – 10,000 ಕ್ಕೂ ಹೆಚ್ಚು.
ಪದವಿ ಪೂರ್ವ ಉಪನ್ಯಾಸಕರು – 3,941.

ಅನುದಾನಿತ ಶಾಲೆಗಳ 6 ಸಾವಿರ ಶಿಕ್ಷಕರ ನೇಮಕಕ್ಕೆ ಸೂಚನೆ ನೀಡಲಾಗಿದೆ, ಹಾಗೂ ಸರ್ಕಾರಿ ಪಿಯು ಕಾಲೇಜುಗಳ 900 ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

Nimma Suddi
";