This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಈ ಹಿಂದೆ ಪ್ರದೀಪ್ ಈಶ್ವರ್ ಚಾಲೆಂಜ್ ಮಾಡಿದ್ದರು. ಸದ್ಯ ನಿನ್ನೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ನಿನ್ನೆ ರಾತ್ರಿ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.

ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿರೋದು ಎಂದು ತಿಳಿಸಿದ್ದಾರೆ.

ಕಿಡಿಗೇಡಿಗಳು ನಿನ್ನೆ ರಾತ್ರಿ ಪ್ರದೀಪ್​ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನೆ ಸಂಬಂಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

";