This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Agriculture News

ಆತಂಕದಲ್ಲಿ ಅನ್ನದಾತ: ಇಳಿಕೆಯಾಗುತ್ತಿರುವ ಕೊಬ್ಬರಿ ಬೆಲೆ

ಆತಂಕದಲ್ಲಿ ಅನ್ನದಾತ: ಇಳಿಕೆಯಾಗುತ್ತಿರುವ ಕೊಬ್ಬರಿ ಬೆಲೆ

ತಿಪಟೂರು : ಒಂದು ಕ್ವಿಂಟಲ್ ಕೊಬ್ಬರಿ ಬೆಲೆ 18000 ರು. ಗಡಿ ದಾಟಿ ದಾಖಲೆ ಸೃಷ್ಟಿಸಿತ್ತು. ನಂತರ ಕಳೆದ ಐದಾರು ವರ್ಷಗಳಿಂದ ಕೊಬ್ಬರಿ ಬೆಲೆ ತೀವ್ರ ಇಳಿಮುಖವಾಗುತ್ತ 8000 ರು.ಯಿಂದ 9000 ರು.ಗೆ ಗಿರಕಿ ಹೊಡೆಯುತ್ತಿದ್ದು, ಇತ್ತೀಚೆಗೆ ನ್ಯಾಫೆಡ್ ಖರೀದಿ ಕೇಂದ್ರಗಳ ಮೂಲಕ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆ ನಡೆಯುತ್ತಿದ್ದರೂ ಸಹ ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಮಾತ್ರ ಏರಿಕೆಯಾಗದಿರುವುದು ಬೆಳೆಗಾರರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ಕಳೆದ ಐದಾರು ವರ್ಷಗಳಿಂದಲೂ ಕೊಬ್ಬರಿ ಬೆಲೆ ೯ ಸಾವಿರ ರು. ಗಡಿ ದಾಟುತ್ತಿಲ್ಲವಾದ್ದರಿಂದ ಇಲ್ಲಿನ ಕೊಬ್ಬರಿ ಬೆಳೆಗಾರರು ತೀವ್ರ ನಷ್ಟಕ್ಕೀಡಾಗುತ್ತಲೇ ಬರುತ್ತಿದ್ದಾರೆ. ಕಳೆದ ೨ ವರ್ಷಗಳಿಂದಲೂ ಬೆಂಬಲ ಬೆಲೆಯಡಿ ಕೇಂದ್ರ ಸರ್ಕಾರ ಕೊಬ್ಬರಿ ಕೊಂಡುಕೊಳ್ಳುವ ಮೂಲಕ ಬೆಳೆಗಾರರ ಹಿತಕಾಯಬೇಕೆಂದು ರೈತರು, ರೈತ ಸಂಘದವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ವಿವಿಧ ಪ್ರತಿಭಟನೆಗಳ ಮೂಲಕ ಒತ್ತಾಯಿಸಿದ್ದವು.

ನ್ಯಾಫೆಡ್ ಖರೀದಿಗೆ ನೋಂದಣಿ ಪ್ರಾರಂಬಿಸಿದಾಗ ಹಗಲು- ರಾತ್ರಿ ಸರತಿಯಲ್ಲಿ ನಿಂತು ಕೊಬ್ಬರಿ ಮಾರಾಟ ನೋಂದಣಿ ದಾಖಲಾತಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಂಡು ಈಗ ಅಲ್ಲಿ ಮಾರಾಟ ಮಾಡುತ್ತಿರುವವರಿಗೆ ಒಂದು ಕ್ವಿಂಟಲ್ ಕೊಬ್ಬರಿಗೆ ೧೩೫೦೦ ರು.ಗಳು ದೊರೆಯುತ್ತಿದ್ದು ಖುಷಿಯಲ್ಲಿದ್ದಾರೆ.

ಬೆಳೆಗಾರರ ಪೈಕಿ ಕೇವಲ ಶೇ.೨೫ಕ್ಕೂ ಕಡಿಮೆ ರೈತರಿಗೆ ಮಾತ್ರ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಬಹಳಷ್ಟು ರೈತರು ನೋಂದಣಿ ಮಾಡಿಸಿಲ್ಲ.ಇಂತಹ ರೈತರು ಎಪಿಎಂಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರುಕಟ್ಟೆಯ ಹರಾಜಿನ ದರದಲ್ಲೇ ಕೊಬ್ಬರಿ ಮಾರಬೇಕಾಗಿದೆ. ದುರಾದೃಷ್ಟವೆಂದರೆ ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಕ್ವಿಂಟಲ್‌ಗೆ ಕೇವಲ ೮೫೦೦ ರು.ಗಳಿಂದ ೯ ಸಾವಿರ ರು.ಗಳೊಳಗಡೆಯೇ ಹರಾಜು ನಡೆಯುತ್ತಿರುವುದರಿಂದ ಬೆಳೆಗಾರರು ಕೊಬ್ಬರಿ ಮಾರಿ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಬೆಂಬಲ ಬೆಲೆ 12 ಸಾವಿರ ರು. ಹಾಗೂ ರಾಜ್ಯ ಸರ್ಕಾರ ಇದಕ್ಕೆ ೧೫೦೦ ರು.ಗಳನ್ನು ಸೇರಿಸಿ ಒಂದು ಕ್ವಿಂಟಲ್ ಕೊಬ್ಬರಿಗೆ ೧೩೫೦೦ ರು.ನಂತೆ ಕೊಬ್ಬರಿ ಕೊಂಡುಕೊಳ್ಳುವ ಪ್ರಕ್ರಿಯೆ ಪ್ರಾರಂಬಿಸಲಾಗಿದೆ. ನಫೆಡ್ ಮೂಲಕ ಖರೀದಿ ಪ್ರಾರಂಭವಾದರೆ, ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಹೆಚ್ಚಿನ ಬೇಡಿಕೆ ಬಂದು ಕೊಬ್ಬರಿ ಬೆಲೆ ಕನಿಷ್ಠ 15000 ರು.ಆದರೂ ಏರಿಕೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿ ರೈತರು ಹಾಗೂ ವರ್ತಕರು ಇದ್ದರು. ಆದರೆ ನ್ಯಾಫೆಡ್ ಖರೀದಿ ಗುರಿಯಲ್ಲಿ ಅರ್ಧಕ್ಕೂ ಹೆಚ್ಚು ಖರೀದಿ ಮುಗಿಯುತ್ತಿದ್ದರೂ ಕೊಬ್ಬರಿ ಬೆಲೆ ಮಾತ್ರ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿಲ್ಲ. ಎಲ್ಲರ ನಂಬಿಕೆ ಹುಸಿಯಾಗಿಸಿ, ಬೆಳೆಗಾರರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

Nimma Suddi
";