This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಕನಕದಾಸರ ಕಂಚಿನ ಪುತ್ಥಳಿ ಲೋಕಾರ್ಪಣೆ

ಕನಕದಾಸರ ಕಂಚಿನ ಪುತ್ಥಳಿ ಲೋಕಾರ್ಪಣೆ

ಅಮೀನಗಡ

ಸಮೀಪದ ಚಿಲ್ಲಾಪೂರ ಗ್ರಾಮದ ಕನಕ ವೃತ್ತದಲ್ಲಿ ನೂತನವಾಗಿ ಕನಕದಾಸರ ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಕನಕದಾಸರ 537ನೇ ಜನ್ಮದಿನೋತ್ಸವ ಕಾರ್ಯಕ್ರಮ ನ.22 ರಂದು ನಡೆಯಲಿದೆ.

ಹುನಗುಂದ ಹಾಗೂ ಇಳಕಲ್ ಅವಳಿ ತಾಲೂಕಿನ ಹಾಲಮತ ಸಮಾಜ ಹಾಗೂ ಗುಡೂರ ಜಿಪಂ ವ್ಯಾಪ್ತಿಯ ಸರ್ವ ಸಮಾಜದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಿದ್ದನಕೊಳ್ಳದ ಧರ್ಮಾಧಿಕಾರಿ ಶಿವಕುಮಾರ ಸ್ವಾಮೀಜಿ, ಧಾರವಾಡದ ಮನಸೂರಿನ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರು, ಸರೂರಿನ ರೇವಣಸಿದ್ದೇಶ್ವರ ಗುರುವಿನ ಸಾನ್ನಿಧ್ಯ ವಹಿಸಲಿದ್ದಾರೆ.

ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಉದ್ಘಾಟನೆ, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಿದ್ದಾರೆ.

ಅತಿಥಿಗಳಾಗಿ ಮುಖಂಡರಾದ ಎಸ್.ಎಚ್.ಪಾಟೀಲ, ರವೀಂದ್ರ ಕಲಬುರ್ಗಿ, ಗಂಗಾಧರ ದೊಡಮನಿ, ಶಂಕ್ರಪ್ಪ ನೇಗಲಿ, ವೀರೇಶ ಉಂಡೋಡಿ, ನೀಲಪ್ಪ ತಪೇಲಿ, ಅಬ್ದುಲ್‌ರಜಾಕ್ ತಟಗಾರ, ದೇವಪ್ಪ ಡಂಬಳ ಇತರರು ಆಗಮಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕ ವಿಜಂiÀiಮಹಾAತೇಶ ಗದ್ದನಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nimma Suddi
";