This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಮಕ್ಕಳ ಲಸಿಕೆಗೆ ಚಾಲನೆ

15-18 ವರ್ಷದ ಮಕ್ಕಳ ಲಸಿಕಾ ಅಭಿಯಾನಕ್ಕೆ ಚರಂತಿಮಠ ಚಾಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಲಸಿಕಾಕರಣ ಅಭಿಯಾನಕ್ಕೆ ಶಾಸಕ ವೀರಣ್ಣ ಚರಂತಿಮಠ ಸೋಮವಾರ ಚಾಲನೆ ನೀಡಿದರು.

ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ದೇಶಾದ್ಯಂತ ಸೋಮವಾರದಿಂದ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ 15-18 ವರ್ಷದ 1 ಲಕ್ಷ ಎರಡು ನೂರಾ ಹನ್ನೊಂದು ಮಕ್ಕಳಿದ್ದಾರೆ. ಇವರೆಲ್ಲರಿಗೂ ಲಸಿಕೆ ನೀಡಲು ಜಿಲ್ಲೆಯಾದ್ಯಂತ ಒಟ್ಟು 250 ತಂಡಗಳು ಏಕಕಾಲದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇತರೆ ಎಲ್ಲ ಅಧಿಕಾರಿಗಳ ಮುತುವರ್ಜಿಯಿಂದ ಜಿಲ್ಲೆಯಲ್ಲಿ ಕೋವಿಡ್ ಶೂನ್ಯ ಪ್ರಮಾಣದಲ್ಲಿದೆ. ಲಸಿಕೆಯನ್ನು ಸಹ ಶೇ.100 ರಷ್ಟು ಸಾಧನೆ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟವರಲ್ಲಿ ಮೊದಲನೇ ಡೋಸ್‍ನಲ್ಲಿ ನೂರರಷ್ಟು ಸಾಧನೆಯಾಗಿದ್ದು, ಎರಡನೇ ಡೋಸ್‍ನಲ್ಲಿ ಶೇ.82 ರಷ್ಟು ಸಾಧನೆ ಮಾಡಲಾಗಿದೆ. ಎರಡನೇ ಡೋಸ್‍ನಲ್ಲೂ ಯಶಸ್ವಿಯಾಗಲಿದ್ದೇವೆ ಎಂದರು.

ಜಾಗತಿಕ ಮಟ್ಟದಲ್ಲಿ ಅತೀ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಿದ ದೇಶ ಭಾರತ ದೇಶವಾಗಿದೆ. ಕೋವಿಡ್ ಮೂರನೇ ಅಲೆ ಮಹಾರಾಷ್ಟ್ರ, ಪಶ್ವಿಮ ಬಂಗಾಲ, ದೆಹಲಿಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜಾಗೃತಿ ವಹಿಸಿದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಪ್ರಸಂಗ ಬರುವದಿಲ್ಲ. ಆದ್ದರಿಂದ ಸಾರ್ವಜನಿಕರು ಸರಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸಲು ಚರಂತಿಮಠ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಂತ ಹಂತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಆರೋಗ್ಯವೇ ಭಾಗ್ಯ, ಇದನ್ನು ಸದಾಕಾಲ ಉಳಿಸಿಕೊಳ್ಳಬೇಕು. ಅಂದಾಗ ಸದೃಡರಾಗಿ ಜೀವಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಎಲ್ಲರ ಸಹಕಾರದಿಂದ ಲಸಿಕಾಕರಣದಲ್ಲಿ ಶೇ.101 ರಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಮಕ್ಕಳು ಸಹ ಸಹಕಾರ ನೀಡಿದ್ದಾರೆ. ಏಕೆಂದರೆ ಜಿಲ್ಲೆಯಲ್ಲಿ ಶೇ.97 ರಷ್ಟು ಲಸಿಕೆಯಾಗಿತ್ತು. ಶಾಲಾ ಮಕ್ಕಳಿಗೆ ತಮ್ಮ ಮನೆಯ ಎಲ್ಲ ಸದಸ್ಯರು ಲಸಿಕೆ ಹಾಕಿಸುವ ಮಾಡಿದ್ದಾರೆ. ಇದರಿಂದ ಲಸಿಕೆಯಲ್ಲಿ ಗುರಿ ತಲುಪಲು ಸಾಧ್ಯವಾಗಿದೆ. ಆದ್ದರಿಂದ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

ಕೊರೊನಾ ಮೂರನೇ ಅಲೆ ಬೇರೆ ಬೇರೆ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ದೇಶದಲ್ಲಿಯೂ ಸಹ ಕಾಲಿಟ್ಟಿದ್ದು, ಎಲ್ಲರೂ ಮುನ್ನಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮುಖ್ಯವಾಗಿ ಮಾಸ್ಕ ಧರಿಸುವುದು, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಅಂತರವನ್ನು ಪಾಲಿಸಿದಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯ. ಆದ್ದರಿಂದ ಸರಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬುಡಾದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿ.ಪಂ ಸಿಇಓ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದಶಕ ಶಶಿಧರ ಪೂಜಾರ, ಹಿರಿಯ ವೈದ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಜೇವೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";