This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Education NewsLocal NewsState News

ಭಾವಗೀತೆಯಲ್ಲಿ ಶಿಕ್ಷಕನ ಸಾಧನೆ

ಭಾವಗೀತೆಯಲ್ಲಿ ಶಿಕ್ಷಕನ ಸಾಧನೆ

ಅಮೀನಗಡ

ಸಮೀಪದ ಚಿಲ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಂಕರ್ ಕತ್ತಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ಬಾಗಲಕೋಟೆ ನವನಗರದ ಆದರ್ಶ ವಿದ್ಯಾಲಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ನಡೆದ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೇ ಗಾಯನದಲ್ಲಿ ಆಸಕ್ತಿ ಇರುವ ಶಿಕ್ಷಕ ಶಂಕರ್ ಕತ್ತಿ ಸ್ಥಳೀಯ ಮತ್ತು ರಾಜ್ಯಮಟ್ಟದ ಸಭೆ ಸಮಾರಂಭಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಲ್ಲಿ ನಡೆದ ಎನ್‌ಪಿಎಸ್ ನೌಕರರ ಹೋರಾಟದಲ್ಲಿ ಇವರು ಹಾಡಿದ ನೂತನ ಪಿಂಚಣಿ ಯೋಜನೆ ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ 20,000ಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿನ ಕೀರ್ತಿ ಹೆಚ್ಚಿಸಿದ ಶಂಕರ್ ಕತ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಎಸ್ ಗುಡಗುಂಟಿ ಅಭಿನಂದಿಸಿದ್ದಾರೆ.

Nimma Suddi
";