This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime NewsPolitics NewsState News

ಸಿಐಡಿ ಅಧಿಕಾರಿಗಳ ತಂಡ ಭೇಟಿ

ಸಿಐಡಿ ಅಧಿಕಾರಿಗಳ ತಂಡ ಭೇಟಿ

ನಿಮ್ಮ ಸುದ್ದಿ ಮಂಡ್ಯ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧದ ಲಂಚ ಬೇಡಿಕೆ ಪ್ರಕರಣದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳು ನಗರಕ್ಕೆ ಬುಧವಾರ ಆಗಮಿಸಿ ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವಿಚಾರಣೆ ನಡೆಸಿದರು.

ಜಿಲ್ಲೆಯ 7 ಮಂದಿ ಸಹಾಯಕ ಕೃಷಿ ನಿರ್ದೇಶಕರು ರಾಜ್ಯಪಾಲರಿಗೆ ಸಚಿವ ಸಿ.ಆರ್.ಎಸ್. ವಿರುದ್ಧ ಬರೆದಿದ್ದಾರೆನ್ನಲಾದ ದೂರು ಪತ್ರದ ಆಧಾರದ ಮೇಲೆ ತನಿಖೆ ನಡೆಸಿ ಕ್ರಮ ವಹಿಸುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿಯು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದರು.
ಈ ಹಿನ್ನಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣವನ್ನು ಸಿಐಡಿಗೆ ವಹಿಸಿದ್ದರು. ಅದರಂತೆ ನಗರಕ್ಕೆ ಬುಧವಾರ ಅಗಮಿಸಿದ ಸಿಐಡಿ ಐಜಿಪಿ ಪ್ರವೀಣ್‌ಮಧುಕರ್ ಪವಾರ್ ನೇತೃತ್ವದ ತಂಡಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಅವರು ಪ್ರಕರಣವನ್ನು ಹಸ್ತಾಂತರಿಸಿದರು. ಬಳಿಕ ಸಿಐಡಿ ಅಧಿಕಾರಿಗಳು ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ
ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ಸೇರಿದಂತೆ ಸಹಾಯಕ ಕೃಷಿ ನಿರ್ದೇಶಕರನ್ನು ವಿಚಾರಣೆಗೆ ಒಳಪಡಿಸಿ, ಮಾಹಿತಿ ಸಂಗ್ರಹಿಸಿದರು.

ಜತೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರನ್ನು ಭೇಟಿ ಮಾಡಿ ಕೆಲವೊತ್ತು ಚರ್ಚೆ ನಡೆಸಿದರು.
ಸ್ಪೀಡ್ ಪೋಸ್ಟ್ ಕವರ್ ಮೇಲೆ ಇದ್ದ ಕೃಷಿ ಇಲಾಖೆಯ ರಮೇಶ್ ಎಂಬ ಸಿಬ್ಬಂದಿ ಬಗ್ಗೆ ಹಾಗೂ ನಮೂದಾಗಿರುವ ಮೊಬೈಲ್ ನಂಬರ್‌ನ ಅಧಿಕಾರಿಯ ಬಗ್ಗೆಯೂ ವಿಚಾರಣೆ ನಡೆಸಿದರು. ರಮೇಶ್ ಎಂಬ ಸಿಬ್ಬಂದಿಯ ಬಗ್ಗೆ ಯಾವುದೇ ಮಾಹಿತಿ ದೊರಕದ ಹಾಗೂ ಮೊಬೈಲ್ ನಂಬರ್ ಹೊಂದಿರುವ ಕೃಷಿ ಇಲಾಖೆಯ ಅಧಿಕಾರಿಯಿಂದ ಹೇಳಿಕೆ ಪಡೆದಿದ್ದಾರೆ. ಆದರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕುರುಹುಗಳು ದೊರಕಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಮೈಸೂರಿನಿಂದ ದೂರು ಅರ್ಜಿ ಅಂಚೆ ಮೂಲಕ ಹೋಗಿರುವ ಮಾಹಿತಿ ಪಡೆದ ಅಧಿಕಾರಿಗಳು ಮೈಸೂರಿನತ್ತ ತೆರಳಿದರು.
………..
ನಿನ್ನೆ ಜಿಲ್ಲಾ ಪೊಲೀಸರು ಮೈಸೂರಿನ ಸರಸ್ವತಿಪುರಂ ಪ್ರಧಾನ ಅಂಚೆ ಕಚೇರಿ ಬಾಕ್ಸ್ ನಿಂದ ದೂರು ಅರ್ಜಿ ಹೋಗಿದೆ ಎಂಬ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಪೊಲೀಸರು ಅಂಚೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಅಲ್ಲಿನ ಸುತ್ತಮುತ್ತ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದರು. ಆದರೆ, ಯಾರ ಸುಳಿವೂ ಸಿಕ್ಕಿಲ್ಲ ಎಂದು ಎನ್ನಲಾಗಿದೆ ಹೀಗಾಗಿ ಅದೇ ಜಾಡು ಹಿಡಿದ ಸಿಐಡಿ ಅಧಿಕಾರಿಗಳು ಮೈಸೂರಿಗೆ ತೆರಳಿದ್ದಾರೆ.

Nimma Suddi
";