This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಮಕ್ಕಳಿಗೆ ಬರೆದ ಆಸ್ತಿ ಮರಳಿ ತಂದೆಗೆ ಬದಲಾಯಿಸಿ ಎಸಿ ಆದೇಶ

ಪಾಲಕರ ಪೋಷಣೆ ಸಂರಕ್ಷಣೆ ಕಾಯ್ದೆಯಡಿ ಉಪವಿಭಾಗಾಧಿಕಾಗಳಿಂದ ಆದೇಶ

ಮಕ್ಕಳಿಗೆ ಬರೆದ ಆಸ್ತಿ ಮರಳಿ ತಂದೆಗೆ ಬದಲಾಯಿಸಿ ಎಸಿ ಆದೇಶ

ನಿಮ್ಮ ಸುದ್ದಿ ಬಾಗಲಕೋಟೆ

ತನ್ನ ಜಮೀನನ್ನು ಇಬ್ಬರು ಮಕ್ಕಳ ಹೆಸರಿಗೆ ಬರೆದು ಕೊಟ್ಟಿದ್ದನ್ನು ಮರಳಿ ಅವರಿಗೆ ಹಕ್ಕನ್ನು ಬದಲಾಯಿಸಿ ಪಾಲಕರ ಪೋಷಣೆ ಹಾಗೂ ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಗುಳೇದಗುಡ್ಡದ ತಾಲೂಕಿನ ಹಂಗರಗಿ ಗ್ರಾಮದ ನಿವಾಸಿ ವೃದ್ದ ಯಮನಪ್ಪ ಮಾದರ ಆಸ್ತಿ ವಿಷಯವಾಗಿ ನ್ಯಾಯ ಕೊಡಿಸುವಂತೆ ಪಾಲಕರ ಪೋಷಣೆ ರಕ್ಷಣಾ ಕಾಯ್ದೆಯಡಿ ಮನವಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆಗೆ ಸಂಬಂದಪಟ್ಟವರಿಗೆ ನೋಟಿಸ್ ಜಾರಿ ಮಾಡಲಾಗಿ ಸದರಿ ಮನವಿದಾರರು ಸುಮಾರು ವರ್ಷಗಳಿಂದ ಆನಾರೋಗ್ಯದಿಂದ ಬಳಲುತ್ತಿರುವದಕ್ಕೆ, ವೈದ್ಯಕೀಯ ದಾಖಲೆಗಳನ್ನು ಹಾಜರಪಡಿಸಿದ್ದರು.

ಮನವಿದಾರ ಯಮನಪ್ಪ ಮಾದರ ಅವರು ಈಗಾಗಲೇ ತಮ್ಮ ಇಬ್ಬರು ಮಕ್ಕಳಾದ ವಾಸುದೇವ ಮತ್ತು ನಿಜಗುಣಿ ಅವರಿಗೆ ತಮ್ಮ ಜಮೀನಿನ ತಮ್ಮ ಹಕ್ಕನ್ನು 1994 ರಲ್ಲಿಯೇ ಬಿಟ್ಟು ಕೊಟ್ಟಿದ್ದರು. ಆದರೆ ಆ ಮಕ್ಕಳು ಅವರ ಜೀವನಕ್ಕೆ ಆರ್ಥಿಕವಾಗಿ ಯಾವ ಸಹಾಯದನ ನೀಡುತ್ತಿರಲಿಲ್ಲ. ತಮ್ಮ ಕೊನೆಯಗಾಲದಲ್ಲಿ ತನ್ನ ನಂತರ ಮಡದಿಯ ಜೀವನ ಸಾಗಿಸಲು ಸೂಕ್ತ ಸಹಾಯಕ ದೊರೆಯುವದಿಲ್ಲವೆಂಬ ಅಳಲನ್ನು ತೋಡಿಕೊಂಡಿದ್ದರು.

ಈ ಕುರಿತು ಪಾಲರ ಪೋಷಣೆ ಸಂರಕ್ಷಣೆ ಹಾಗೂ ಹಿರಿಯ ನಾಗರಿಕ ರಕ್ಷಣಾ ನ್ಯಾಯ ಮಂಡಳಿಯಲ್ಲಿ ಸದರಿ ಮನವಿದಾರ ಮತ್ತು ಪ್ರತಿವಾದಿಗಳ ಹೇಳಿಕೆ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರು ಗುಳೇದಗುಡ್ಡ ತಾಲೂಕಿನ ಹಂಗರಗಿ ಗ್ರಾಮದ ಜಮೀನನ್ನು ತನ್ನ ಇಬ್ಬರು ಗಂಡು ಮಕ್ಕಳಿಗೆ ಹಕ್ಕು ಬಿಟ್ಟಿರುವುದನ್ನು ರದ್ದು ಮಾಡಿ ಮರಳಿ ತಂದೆ-ತಾಯಿಯರ ಹೆಸರಿಗೆ ಹಕ್ಕು ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.