This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟಕ್ಕಿಳಿದಿದ್ದೇನೆ: ಕೆ ಎಸ್ ಈಶ್ವರಪ್ಪ

ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟಕ್ಕಿಳಿದಿದ್ದೇನೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಎಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಮ್ಮ ವಾಗ್ದಾಳಿಯನ್ನು ನಡೆಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಗನಿಗೆ ಟಿಕೆಟ್ ಸಿಕ್ಕಿಲ್ಲ ಅಂತ ಮಾತ್ರ ತಾನು ಅಸಮಾಧಾನಗೊಂಡಿಲ್ಲ, ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ವಿರುದ್ಧ ಮತ್ತು ಹಿಂದೂತ್ವ ಉಳಿಸಲು ಹೋರಾಟ ಮಾಡುತ್ತಿರುವುದಾಗಿ ತಿಳಿಸಿದರು.

ರಾಷ್ಟ್ರಮಟ್ಟದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪರಿವಾರವಾದವನ್ನು ವಿರೋಧಿಸುವ ಹಾಯೆಯೇ ತಾನು ಕರ್ನಾಟಕದಲ್ಲಿ ಯಡಿಯೂರಪ್ಪರ ಕುಟುಂಬ ವಾದದ ವಿರುದ್ಧ ಸೆಡ್ಡು ಹೊಡೆದಿರುವ. ಅವರ ಒಬ್ಬ ಮಗ ಸಂಸದನಾಗಿದ್ದಾರೆ ಮತ್ತೊಬ್ಬ ಶಾಸಕನಾಗಿದ್ದಾರೆ ಮತ್ತು ಅವರು ಕೇಂದ್ರ ಚುನಾವಣಾ ಮಂಡಳಿಯ ಸದಸ್ಯರಾಗಿದ್ದಾರೆ ಎಂದರು.

ಅಷ್ಟಾಗಿಯೂ ಅವರು ವಿಧಾನಸಭಾ ಚುನಾವಣೆಯ ಆರು ತಿಂಗಳ ಬಳಿಕ ದೆಹಲಿಗೆ ಹೋಗಿ ತಮ್ಮ ಮಗನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದರು.
ಹಿಂದೂತ್ವವಾದಿಗಳಾಗಿರುವ ಸಿಟಿ ರವಿ, ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸದಾನಂದಗೌಡರನ್ನು ಯಡಿಯೂರಪ್ಪ ಮೂಲೆಗುಂಪು ಮಾಡಿದರು ಎಂದು ಈಶ್ವರಪ್ಪ ಹೇಳಿದರು.

 

";