This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ವಿಜಯಪುರ: ದಯಾಮರಣಕ್ಕೆ ಸಂತ್ರಸ್ತೆ ಮನವಿ,ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ

ವಿಜಯಪುರ: ದಯಾಮರಣಕ್ಕೆ ಸಂತ್ರಸ್ತೆ ಮನವಿ,ಅಕ್ಕ ಮಹಾದೇವಿ ಮಹಿಳಾ ವಿವಿ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿಯಲ್ಲಿಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬಯಲಿಗೆ ಬಂದಿದೆ. ಲೈಂಗಿಕ ಕಿರುಕುಳ ತಾಳಲಾರದೆ ದಯಾಮರಣ ನೀಡಬೇಕೆಂದು ಸಂತ್ರಸ್ತೆ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ವಿಶ್ವವಿದ್ಯಾಲಯದ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆಗೆ ಮಹಿಳಾ ವಿವಿಯ ಸಿಬ್ಬಂದಿ ಶ್ರೀಶೈಲ ದೊಡಮನಿಯಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ.

ಲೈಂಗಿಕ ಕಿರುಕುಳದ ಕುರಿತು ವಿವಿಯ ಆಂತರಿಕ ದೂರು ಸಮಿತಿಗೆ ಕಳೆದ ಪೆಬ್ರವರಿ 14 ರಂದು ಸಂತ್ರಸ್ತೆ ದೂರು ನೀಡಿದ್ದರು. ಆದರೆ ಆಂತರಿಕ ದೂರು ಸಮಿತಿ ಈವರೆಗೂ ಸಂತ್ರಸ್ತೆ ನೀಡಿರೋ ದೂರಿನ ಕುರಿತು ಕ್ರಮ ತೆಗೆದುಕೊಂಡಿಲ್ಲ. ಇದೇ ವಿವಿಯ ಉದ್ಯಾನವನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ 2015ರಲ್ಲಿ ವಿವಿಯ ಆವರಣದ ತಡೆಗೋಡೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪತಿಯ ಮರಣದ ನಂತರ ಮಹಿಳೆಗೆ ಉದ್ಯಾನವನ ವಿಭಾಗದಲ್ಲಿ ಕೆಲಸ ಸಿಕ್ಕಿತ್ತು. ಪತಿ ಮರಣ ನಂತರ ಪಿಎಫ್ ಹಣ ನೀಡಿಲ್ಲ ಎಂದು ಕೂಡ ಸಂತ್ರಸ್ತ ಮಹಿಳೆ ಆರೋಪ ಮಾಡಿದ್ದಾರೆ.

ಎಸ್​ಸಿ, ಎಸ್ಟಿ ನೌಕರರ ಸಂಘದ ಪದಾಧಿಕಾರಿ ಸುಭಾಷ್ ಕಾಂಬಳೆ, ಹಣಕಾಸು ವಿಭಾಗದವರು ಸತಾಯಿಸುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ಒಂದೆಡೆ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ, ಮತ್ತೊಂದಡೆ ಪತಿಯ ಪಿಎಫ್ ಹಣ ನೀಡದೇ ಸತಾಯಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ದಯಾಮರಣಕ್ಕಾಗಿ ಡಿಸಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ನ್ಯಾಯಕೊಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಮಹಿಳೆ ಪಟ್ಟು ಹಿಡಿದಿದ್ದಾರೆ.

";