This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ರಮೇಶ್ ಜಾರಕಿಹೊಳಿ‌ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ: ಅಲ್ಪಮತಿಗಳಿಗೆ ಗಮನಿಸುವುದಿಲ್ಲ ಎಂದ ಅಥಣಿ ಶಾಸಕ

ರಮೇಶ್ ಜಾರಕಿಹೊಳಿ‌ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ: ಅಲ್ಪಮತಿಗಳಿಗೆ ಗಮನಿಸುವುದಿಲ್ಲ ಎಂದ ಅಥಣಿ ಶಾಸಕ

ಬೆಳಗಾವಿ: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ನಡುವೆ ಮಾತಿನ ಜಟಾಪಟಿ ನಡೆದಿದ್ದು,“ಪ್ರತಿಯೊಬ್ಬರು ಅಲ್ಪಮತಿಗೆ ಹೊಳೆದಷ್ಟು ಮಾತ‌ನಾಡುತ್ತಾರೆ. ಅಲ್ಪಮತಿಗಳ ಬಗ್ಗೆ ನಾನು ಹೆಚ್ಚು ಒತ್ತುಕೊಡುವುದಿಲ್ಲ” ಎಂದು ಶಾಸಕ ಲಕ್ಷ್ಮಣ ಸವದಿ ಪರೋಕ್ಷವಾಗಿ ರಮೇಶ್​ ಜಾರಕಿಹೊಳಿಗೆ ಅಲ್ಪಮತಿ ಎಂದು ಜರಿದರು.

ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಆಹ್ವಾನ ಬಂದಿದೆಯಾ? ನೀವು ದೇಣಿ ಕೊಟ್ಟಿದ್ದೀರಾ? ಅಂತ ಮಾಧ್ಯಮದವರು ಪ್ರಶ್ನಿಸಿದರು. ಅದಕ್ಕೆ ನಾನು ಬಿಜೆಪಿಯಲ್ಲಿದ್ದಾಗ 10 ಲಕ್ಷ ರೂ. ದೇಣಿಗೆ ಕೊಟ್ಟಿರುವೆ ಎಂದು ಹೇಳಿದೆ. ಇಲ್ಲಿ ಯಾರೋ ಒಬ್ಬರು ಕೋಟಿ ಕೊಟ್ಟವರಿಗೆ ಕರೆದಿಲ್ಲಾ ಹತ್ತು ಲಕ್ಷ ಕೊಟ್ಟವರು ಏನು ದೊಡ್ಡ ವಿಷಯ ಅಂದಿದ್ದಾರೆ. ಅದರ ಬಗ್ಗೆ ನನಗೆ ಬೇಸರವೆ ಇಲ್ಲ ಎಂದು ಹೇಳಿದರು.

ನನಗೆ ಯಾಕೆ ಕರೆದಿಲ್ಲ ಅಂತ ಕೇಳಿಲ್ಲ. ನನ್ನ ತಂದೆ ತಾಯಿ ನನಗೆ ಲಕ್ಷ್ಮಣ ಅಂತ ಹೆಸರು ಇಟ್ಟಿದ್ದಾರೆ. ಶ್ರೀರಾಮನ‌ ಸಹೋದರ ಲಕ್ಷ್ಮಣನ ಹೆಸರು ನನಗೆ ನಾಮಕರಣ ಮಾಡಿದ್ದಾರೆ. ಇವರು ಹಣ ಸಂಗ್ರಹ ಮಾಡುವಂತವರು. ಹಣ ಸಂಗ್ರಹ ಮಾಡಿ ರಾಮ ಮಂದಿರಕ್ಕೆ ಕೊಟ್ಟಿದ್ದಾರೆ ಎಂದರು.

ಈ ಮೂಲಕ ರಮೇಶ್ ಜಾರಕಿಹೊಳಿ‌ ಸ್ವಂತ ಹಣ ನೀಡದೇ ಸಂಗ್ರಹ ಮಾಡಿ ಕೊಟ್ಟಿದ್ದು, ಈ ಶುಭ‌‌ ಸಂದರ್ಭದಲ್ಲಿ ಚರ್ಚೆ ಬೇಡ. ಸಮಯ ಬಂದಾಗ ಚರ್ಚೆ ಮಾಡೋಣ ಅಂತಾ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ‌ಗೆ ತೀರುಗೇಟು ನೀಡಿದರು.

Nimma Suddi
";