This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರುವ ಮೂಲಕ ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿದೆ: ಬಿ.ವೈ ವಿಜಯೇಂದ್ರ

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರುವ ಮೂಲಕ ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿದೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ನೆರವೇರುವ ಮೂಲಕ ಕೋಟಿ ಕೋಟಿ ರಾಮಭಕ್ತರ ಆಸೆ ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠೆ ಕಾರ್ಯ ನೆರವೇರಿದೆ. ಇದು ಅತ್ಯಂತ ಹೆಮ್ಮೆಯ ಮತ್ತು ಸಂತೋಷದ ವಿಚಾರ ಎಂದು ಸೂಚಿಸಿದರು.

ಬಲರಾಮನ ವಿಗ್ರಹಕ್ಕೆ ಶಿಲೆ ಕೂಡ ಕರ್ನಾಟಕದಿಂದ ಲಭಿಸಿದೆ. ಮೂರ್ತಿಯ ಶಿಲ್ಪಿ ಕೂಡಾ ಕನ್ನಡಿಗರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಅವರು ವಿಶ್ಲೇಷಿಸಿದರು.

ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆ ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಎಂದು ಹೇಳಿದರು.

ವಿಜಯೇಂದ್ರ ಅವರು ಇಂದು ಮಹಾಲಕ್ಷ್ಮೀ ಲೇಔಟ್‍ನ ರಾಣಿ ಅಬ್ಬಕ್ಕ ಮೈದಾನದಲ್ಲಿ ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ನಡೆದ ಶ್ರೀರಾಮತಾರಕ ಮಹಾಯಾಗ-ಕಲಶಾಭಿಶೇಕ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದರು.

 

Nimma Suddi
";