This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗುತ್ತಿದೆ : ಆರ್ ಅಶೋಕ ವಾಗ್ದಾಳಿ

ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗುತ್ತಿದೆ : ಆರ್ ಅಶೋಕ ವಾಗ್ದಾಳಿ

ಬೆಂಗಳೂರು: ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಉದಾಹರಣೆ, ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಬಂದಿರುವ ಕೊಲೆ ಬೆದರಿಕೆ. ಎಲ್ಲಿ ಕಾನೂನು ಸುವ್ಯವಸ್ಥೆ ಸರಿ ಇರುತ್ತದೋ, ಅಲ್ಲಿಗೆ ಬಂಡವಾಳ‌ ಹರಿದು ಬರುತ್ತದೆ. ನಮ್ಮ ರಾಜ್ಯದಲ್ಲಿ ಅನೇಕ ಹೂಡಿಕೆ ಬರುತ್ತಿತ್ತು, ಆದರೆ ಈಗ ಹೂಡಿಕೆದಾರರ ಸಂಖ್ಯೆ ಕಡಿಮೆಯಾಗಿದೆ ಎಂದರು.

ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕ ಈಗ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ನಂಬರ್ ಒನ್ ಕ್ರೈಮ್ ಸಿಟಿ ಆಗಿದೆ. ಸೈಬರ್ ವಂಚನೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. 438 ಕೋಟಿ ಸೈಬರ್ ವಂಚನೆ ಆಗಿದ್ದು, ನಮ್ಮ ಸರ್ಕಾರ ಇದ್ದಾಗ ಬಾಲ ಮುಚ್ಚಿಕೊಂಡಿದ್ದ ಭಯೋತ್ಪಾದಕರು, ಬೀದಿ ಬೀದಿಗಳಲ್ಲಿ ಓಡಾಡುತ್ತಿದ್ದಾರೆ. ಪಿಎಫ್‌ಐ ಸಂಘಟನೆಯವರು ಕೇಸ್ ವಾಪಸ್ ತೆಗೆದುಕೊಳ್ಳುತ್ತಾರೆ ಎಂದು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದು ತಿಳಿಸಿದರು..

ಹಿಂದೆಲ್ಲ ಜನ್ಮದಿನ ಕಾರ್ಯಕ್ರಮಕ್ಕೆ ಕಟೌಟ್, ಫ್ಲೆಕ್ಸ್ ಹಾಕುತ್ತಿದ್ದರು ಕೋಲಾರದಲ್ಲಿ ರಾಜಾರೋಷವಾಗಿ ತಲ್ವಾರ್ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

";