This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಪ್ರಜ್ವಲ್ ಪ್ರಕರಣದಲ್ಲಿ ಎಸ್ ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದಲ್ಲಿ ಎಸ್ ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಯಾವ ರೀತಿ ಪ್ರಚಲಿತಕ್ಕೆ ಬಂತು ಯಾರು ಪ್ರಚಾರ ಮಾಡಿದರು. ಪೆನ್ ಡ್ರೈವ್ ಯಾರ ಹತ್ತಿರ ಇತ್ತು ಅವರು ಯಾಕೇ ಅರೆಸ್ಟ್ ಆದರು ಅನ್ನುವುದರ ಕುರಿತು ಹಲವು ಆಯಾಮಗಳನ್ನು ಪಡೆದಿತ್ತು. ಖಂಡಿತವಾಗಿಯೂ ಇದರಲ್ಲಿ ರಾಜಕಾರಣವು ಬೆರತ್ತಿತ್ತು. ಕಾನೂನು ಪ್ರಕಾರ ಇಂತಹದ್ದನ್ನು ಪ್ರಚಾರ ಮಾಡುವುದು ಕಾನೂನು ವಿರುದ್ದವಾದದ್ದು. ಆ ನಿಟ್ಟಿನಲ್ಲಿ ಎಸ್ ಐಟಿ ಮುಂದುವರೆದು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ವಾಲ್ಮೀಕಿ ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರ ಪ್ರಕರಣವು ಸಿಬಿಐಗೆ ಹೋಗುವುದು ಯೋಗ್ಯವಾಗಿದೆ ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ ಎಂದರು.

ಪೆನ್ ಡ್ರೈವ್ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಕಾನೂನಾತ್ಮಕವಾಗಿ ಶರಣಾಗಿದ್ದಾನೆ. ಎಸ್ ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು.

";