This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsNational NewsPolitics NewsState News

ಬಿಜೆಪಿಯಿಂದ ಬೃಹತ ರ‍್ಯಾಲಿ:ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ನಾಮಪತ್ರ ಸಲ್ಲಿಕೆ

ಬಿಜೆಪಿಯಿಂದ ಬೃಹತ ರ‍್ಯಾಲಿ:ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ನಾಮಪತ್ರ ಸಲ್ಲಿಕೆ

ಬಾಗಲಕೋಟೆ:

ಲೋಕಸಭಾ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಏ.೧೮ ರಂದು ನಾಮಪತ್ರ ಸಲ್ಲಿಸಲಿದ್ದು ನಗರದಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೋಳ್ಳಲಾಗಿದೆ.

ನಗರದ ಕಣವಿ ವೀರಭದ್ರೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ, ಬಿಳೂರ ಅಜ್ಜನ ದೇವಸ್ಥಾನ, ಟೆಂಗಿನ ಮಠದ ರಸ್ತೆ ಮೂಲಕ ಅಡತ್ ಬಜಾರದ, ಪೋಲಿಸ್ ಚೌಕ್, ಮಹಾತ್ಮ ಗಾಂಧಿ ರಸ್ತೆ ಮುಖಾಂತರ ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡು ರಾಜ್ಯ ನಾಯಕರಿಂದ ಬಹಿರಂಗ ಮತಯಾಚನೆ ಮಾಡುವರು,ನಂತರ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮ ಪತ್ರ ಸಲ್ಲಿಸಲಾಗುವುದು.

ಬೃಹತ್ ರ‍್ಯಾಲಿಯಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶಟ್ಟರ, ಗೋವಿಂದ ಕಾರಜೋಳ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಭಾಲಚಂದ್ರ ಜಾರಕಿಹೊಳಿ, ವಿಜಯಪುರದ ಶಾಸಕ ಬಸವನಗೌಡ ಪಾಟೀಲ ಯತ್ನಾಳ, ನರಗುಂದ ಶಾಸಕ ಸಿ.ಸಿ.ಪಾಟೀಲ, ಚುನಾವಣಾ ಉಸ್ತುವಾರಿ ಲಿಂಗರಾಜ ಪಾಟೀಲ, ಮಹೇಶ ಟೆಂಗಿನಕಾಯಿ, ಲೋಕಸಭಾಕ್ಷೇತ್ರ ವ್ಯಾಪ್ತೀಯ ಹಾಲಿ ಮತ್ತು ಮಾಜಿ ಶಾಸಕರು, ಸಂಸದರು, ರಾಜ್ಯ ಪದಾಧಿಕಾರಿಗಳು, ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.

ಲೋಕಸಭಾ ಕ್ಷೇತ್ರದ ಎಲ್ಲ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೃಹತ್ ರ‍್ಯಾಲಿಯನ್ನುಯಶಸ್ವಿಗೊಳಿಸಬೇಕೆಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ

Nimma Suddi
";