This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಮಾತ್ರ ದೇಶಕ್ಕೆ ವಿಶ್ವಗುರು ಪಟ್ಟ ಸಾಧ್ಯ: ಬೊಮ್ಮಾಯಿ

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಮಾತ್ರ ದೇಶಕ್ಕೆ ವಿಶ್ವಗುರು ಪಟ್ಟ ಸಾಧ್ಯ: ಬೊಮ್ಮಾಯಿ

ಹಿರೇಕೆರೂರು: ಜಗತ್ತಿಗೆ ಭಾರತ ದೇಶ ವಿಶ್ವಗುರುವಿನ ಪಟ್ಟ ಪಡೆಯಬೇಕು ಎಂದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಮಾತ್ರ ಸಾಧ್ಯ ಎಂದು ಹಾವೇರಿ, ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಮತಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೋದಿ ನೇತೃತ್ವದ ಆಡಳಿತದಿಂದ ಮಾತ್ರ ದೇಶ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಸ್ಮಾರ್ಟ ಸಿಟಿ, ವಿದ್ಯುತ್ ರೈಲ್ವೆ ಸಂಚಾರ, ಹೊಸ ರೈಲು ಮಾರ್ಗಗಳ ನಿರ್ಮಾಣ, ಮನೆಮನೆಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ, ರಸ್ತೆ ನಿರ್ಮಾಣ, ವಿಮಾನ ನಿಲ್ದಾಣ ಯೋಜನೆ ಸೇರಿದಂತೆ ದೇಶದಲ್ಲಿ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ ಎಂದು ವಿವರಿಸಿದರು.

ಮೋದಿಯವರು ಹ್ಯಾಟ್ರಿಕ್ ಜಯ ಸಾಧಿಸಿ ಮತ್ತೆ ಅಧಿಕಾರದ ಗದ್ದುಗೆ ಎರಲು ನನ್ನನ್ನು ಹೆಚ್ಚು ಮತಗಳಿಂದ ಆಯ್ಕೆ ಮಾಡಬೇಕು ಎಂದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಜಗತ್ತೆ ಭಾರತದತ್ತ ನಿಬ್ಬೆರಗಾಗಿ ತಿರುಗಿ ಮೋಡುವಂತೆ ಮಾಡಿದ, ಈ ದೇಶ ಕಂಡ ಅತ್ಯುತ್ತಮ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು, ಕೊರೋನಾ ಮಹಾಮಾರಿಯ ಸಂದಿಗ್ಧ ಸ್ಥಿತಿಯನ್ನು ಅತ್ಯಂತ ಧೈರ್ಯವಾಗಿ ಎದುರಿಸಿ, ದೇಶದ ಜನತೆಗೆ ಉಚಿತವಾಗಿ ಲಸಿಕೆ ಹಾಕಿಸಿ ಪ್ರಾಣ ರಕ್ಷಣೆ ಮಾಡಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ ಎಂದು ಸೂಚಿಸಿದರು.

";