This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಸಚಿವ ಶಿವರಾಜ್ ತಂಗಡಗಿಗೆ ಈ ಹೇಳಿಕೆ ಶೋಭೆ ತರಲ್ಲ – ಬಿಎಸ್‌ ಯಡಿಯೂರಪ್ಪ

ಸಚಿವ ಶಿವರಾಜ್ ತಂಗಡಗಿಗೆ ಈ ಹೇಳಿಕೆ ಶೋಭೆ ತರಲ್ಲ – ಬಿಎಸ್‌ ಯಡಿಯೂರಪ್ಪ

ಬೆಳಗಾವಿ: ಸಂಸದೆ ಸುಮಲತಾ ಅವರು ಈಗ ಸಮಾಧಾನದಿಂದ ಇರಬೇಕಿದ್ದು, ಮುಂದಿನ ದಿನ ಅವರಿಗೆ ಒಳ್ಳೆಯ ಅವಕಾಶ, ಸೂಕ್ತ ಸ್ಥಾನಮಾನ ಸಿಗುತ್ತೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸುಮಲತಾಗೆ ಬೇಸರ ಆಗಿರುತ್ತೆ, ಆದರೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದರು.

“ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಬೇಕು “ಎಂಬ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಎಸ್‌ ಯಡಿಯೂರಪ್ಪ ಕಿಡಿಕಾರಿದರು.

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಸೇರಿ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ಈ ಸಲ 28 ಕ್ಷೇತ್ರ ಗೆಲ್ಲಿಸಬೇಕು ಅದೇ ನಮ್ಮ ಗುರಿ. ಹಣಕಾಸಿನ ಬಗ್ಗೆ ನಿರ್ಮಲಾ ಸೀತಾರಾಮ್ ಸ್ಪಷ್ಟನೆ ನೀಡಿದ್ದಾರೆ, ರಾಜ್ಯಕ್ಕೆ ತಲುಪುವ ಒಂದು ರೂಪಾಯಿಯನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಸಚಿವ ಶಿವರಾಜ್ ತಂಗಡಗಿಗೆ ಈ ಹೇಳಿಕೆ ಶೋಭೆ ತರಲ್ಲ. ಇದು ಕಾಂಗ್ರೆಸ್ ಗೆ ಶೋಭೆ ತರಲ್ಲ, ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ” ಎಂದು ಹೇಳಿದರು.

 

";