This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಸಂಸದರನ್ನು ದೆಹಲಿಗೆ ಕರೆದುಕೊಂಡು ಬರುವೆ ! ನರೇಂದ್ರ ಮೋದಿಗೆ ವಾಗ್ದಾನ ಕೊಟ್ಟ ಬಿಎಸ್‌ವೈ

ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಸಂಸದರನ್ನು ದೆಹಲಿಗೆ ಕರೆದುಕೊಂಡು ಬರುವೆ ! ನರೇಂದ್ರ ಮೋದಿಗೆ ವಾಗ್ದಾನ ಕೊಟ್ಟ ಬಿಎಸ್‌ವೈ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಸಂಸದರನ್ನು ದೆಹಲಿಗೆ ಕರೆದುಕೊಂಡು ಬರುವೆ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದದ ಫ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ನಡೆದ ವಿಕಸಿತ ಭಾರತ ಸಂಕಲ್ಪ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಪಕ್ಷವನ್ನು ಬಲಪಡಿಸುವ ಕೆಲಸ ಮಾಡ್ತಿದ್ದಾರೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಣಕಹಲೆ ಮೊಳಗಿಸಿದ್ದಾರೆ. ಇದು ಕರ್ನಾಟಕದ ಜನರ ಮೇಲಿನ ನಂಬಿಕೆ ತೋರಿಸುತ್ತಿದ್ದು, ಮೋದಿ ಸರ್ಕಾರ ಕೇವಲ ಚುನಾವಣೆಗೆ ಕೆಲಸ ಮಾಡುವ ಸರ್ಕಾರ ಅಲ್ಲ, ವರ್ಷದ 365 ದಿನಗಳ ಕಾಲ ಗಡಿಯನ್ನು ಸುರಕ್ಷಿತವಾಗಿಡಲು ರಕ್ಷಣಾ ಸಾಮಾಗ್ರಿ ಒದಗಿಸುತ್ತಿದೆ. ಕಿಸಾನ್ ಸನ್ಮಾನ್ ಯೋಜನೆಯಡಿ 6000 ನೇರವಾಗಿ ರೈತರ ಖಾತೆಗೆ ಜಮೆ ಮಾಡುತ್ತಿದೆ ಎಂದರು.

Nimma Suddi
";