This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಸೋಲಿಸುವ ಮೂಲಕ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ : ಸಿದ್ದರಾಮಯ್ಯ

ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಸೋಲಿಸುವ ಮೂಲಕ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ : ಸಿದ್ದರಾಮಯ್ಯ

ಬೆಂಗಳೂರು: ಕಳೆದವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯ ರೆಡ್ಡಿಗೆ ಅನ್ಯಾಯವಾಗಿದ್ದು, ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಸೋಲಿಸುವ ಮೂಲಕ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಪರವಾಗಿ ಅವರು ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದರು. ಈ ವೇಳೆ ಸಂಸದ ತೇಜಸ್ವಿಸೂರ್ಯ ಅವರ ವೈಫಲ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸದರು. ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಅಭಿಪ್ರಾಯಪಟ್ಟರು

.ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ60 ರಷ್ಟು ಮಾತ್ರ. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದರು.

ಭಾನುವಾರ ಸಂಜೆ ಬೊಮ್ಮನಹಳ್ಳಿಯಲ್ಲಿ ನಡೆದ ಭರ್ಜರಿ ರೋಡ್ ಶೋನಲ್ಲೂ ಅವರು ಈ ಬಾರಿ ಸೌಮ್ಯ ರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ, ಸಂಸದ ತೇಜಸ್ವಿ ಸೂರ್ಯನಿಗೆ ಸೋಲಾಗುತ್ತದೆ ಎಂದು ಭವಿಷ್ಯ ನುಡಿದಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತೀಯರಿಗೆ ಕೊಟ್ಟ ಒಂದು ಮಾತನ್ನೂ ಉಳಿಸಿಕೊಂಡಿಲ್ಲ. ಕಪ್ಪುಹಣ ವಾಪಾಸ್ ತರಲಿಲ್ಲ. ಭಾರತೀಯರ ಖಾತೆಗೆ 15 ಲಕ್ಷ ಹಾಕಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ. ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದ್ದು ತೇಜಸ್ವಿಸೂರ್ಯನನ್ನು ಸೋಲಿಸಿ ಸೌಮ್ಯರೆಡ್ಡಿಗೆ ನ್ಯಾಯ ಕೊಡಿ ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದಿದ್ದರು.ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ.

ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ. ಸಂಸದ ತೇಜಸ್ವಿ ಸೂರ್ಯ ಸಂಸದರಾಗಿ ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಮ್ಮೆಯೂ ಧ್ವನಿ ಎತ್ತಿಲ್ಲ. ಮೋದಿ ಮುಖ ತೋರಿಸಿ ಓಟು ಕೇಳುವ ದುರ್ಗತಿ ಬಿಜೆಪಿಗೆ ಬಂದಿದೆ. ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವ ಮುಖ ಇಲ್ಲ. ಏಕೆಂದರೆ ಇವರು ಅಭಿವೃದ್ಧಿ ಕಾರ್ಯಗಳನ್ನೇ ಮಾಡಿಲ್ಲ ಎಂದಿದ್ದರು.

";