This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ರಾಜ್ಯ ಸರ್ಕಾರದ ಪ್ರಮಾದಗಳಿಗೆ ಜನ ಪಾಠ ಕಲಿಸಲಿದ್ದಾರೆ: ಬಿವೈ ವಿಜಯೇಂದ್ರ

ರಾಜ್ಯ ಸರ್ಕಾರದ ಪ್ರಮಾದಗಳಿಗೆ ಜನ ಪಾಠ ಕಲಿಸಲಿದ್ದಾರೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಮೊದಲ ಹಂತದ ಮತದಾನ ನಡೆದ ಕ್ಷೇತ್ರಗಳಲ್ಲಿ ನಡೆಸಿದ ಪ್ರಚಾರದಲ್ಲಿ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಕಾರ್ಡನ್ನೇ ಬಳಸಿದೆ, ಅದರೆ ಅದು ಮತದಾರರ ಮೇಲೆ ಪ್ರಭಾವ ಬೀರಿಲ್ಲ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರದ ಬೂಟಾಟಿಕೆ, ಅಧಿಕಾರದ ಅಮಲಿನಲ್ಲಿ ತೆಗೆದುಕೊಳ್ಳುತ್ತಿರುವ ತಪ್ಪು ನಿರ್ಣಯಗಳು, ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಪ್ರದರ್ಶಿಸಿದ ಧೋರಣೆ ಮತ್ತು ತುಷ್ಟೀಕರಣದ ರಾಜಕಾರಣದಿಂದ ಬೇಸತ್ತಿರುವ ಜನ ಸಿದ್ದರಾಮಯ್ಯ ಸರ್ಕಾರಕ್ಕೆ ಪಾಠ ಕಲಿಸುವ ನಿರ್ಧಾರ ಮಾಡಿಕೊಂಡಿದ್ದಾರೆ ಎಂದರು.

ಮೊದಲ ಹಂತದ ಚುನಾವನೆಯ ಬಳಿಕ ಲಬ್ಯವಾಗುತ್ತಿರುವ ಸುಳಿವುಗಳಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹೆಚ್ಚು ಕಡಿಮೆ ಎಲ್ಲ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿರುವುದು ಖಚಿತವಾಗುತ್ತಿದೆ, 10-12 ಸ್ಥಾನ ಗೆಲ್ಲುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಭ್ರಮನಿರಸನವಾಗಲಿದೆ ಎಂದು ವಿಜಯೇಂದ್ರ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ವಿಜಯೇಂದ್ರ ಹತಾಷರಾಗಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ ಎಂದಾಗ ಹೆಚ್ಚು ಕಾಮೆಂಟ್ ಮಾಡಲಿಚ್ಛಿಸದ ಅವರು ದೇವರು ಈಶ್ವರಪ್ಪಗೆ ಒಳ್ಳೇದು ಮಾಡಲಿ ಅಂತಷ್ಟೇ ಹೇಳಿದರು.

";