This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದಿದ್ದ ಮಗು ಸಾತ್ವಿಕ 20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಪವಾಡ ಸದೃಶ್ಯವೆಂಬಂತೆ ಬದುಕಿ ಬಂದಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಆ ಮೂಲಕ ನಾಡಿನ ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಫಲಿಸಿವೆ. ವೈದ್ಯರು ಕೂಡ ಸಾತ್ವಿಕ್​ಗೆ ಚಿಕಿತ್ಸೆ ನೀಡಿದ್ದು, ನಾರ್ಮಲ್​ ಆಗಿದ್ದಾನೆ, ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ. ಇತ್ತ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ಜನರಿಗೆ ಸಂದೇಶ ಕೂಡ ನೀಡಿದ್ದಾರೆ.

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.

ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದರು.

";