This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಗ್ಯಾರೆಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲಿಲ್ಲದ ಆಸಕ್ತಿ, ಆತುರ: ಆರ್‌. ಅಶೋಕ್

ಗ್ಯಾರೆಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲಿಲ್ಲದ ಆಸಕ್ತಿ, ಆತುರ: ಆರ್‌. ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಆದರೆ ನೂರಾರು ಕೋಟಿ ಖರ್ಚು ಮಾಡಿ ಒಂದಲ್ಲ ಹತ್ತಾರು ಮೂಲಗಳಿಂದ ಗ್ಯಾರೆಂಟಿಗಳ ಬಗ್ಗೆ ಸಮೀಕ್ಷೆ ಮಾಡಿಸಲು ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲಿಲ್ಲದ ಆಸಕ್ತಿ, ಆತುರ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ತಿಳಿಸಿದರು.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಗ್ಯಾರೆಂಟಿ ಯೋಜನೆಗಳು ನಿಜವಾಗಿಯೂ ಜನರಿಗೆ ತಲುಪಿದ್ದರೆ, ಅದನ್ನು ಜನ ಮೆಚ್ಚಿದ್ದರೆ ಈ ಸಮೀಕ್ಷೆ ನಡೆಸುವ ಅಗತ್ಯ ಏನಿದೆ? ಎಂದು ಅವರು ಪ್ರಶ್ನಿಸಿದರು.

ಯಾವುದೇ ಯೋಜನೆ ಜನರ ಬದುಕಿನ ಮೇಲೆ ಬೀರಿರುವ ಪರಿಣಾಮ, ಯೋಜನೆಯ ಪೂರ್ವದಲ್ಲಿ, ಯೋಜನೆಯ ನಂತರದಲ್ಲಿ ಅದು ಜನರ ಬದುಕಿನಲ್ಲಿ ತಂದಿರುವ ಬದಲಾವಣೆ ಬಗ್ಗೆ ವೈಜ್ಞಾನಿಕ ಅಧ್ಯಯನ ಮಾಡಬೇಕಾದರೆ ಅದಕ್ಕೆ ಕನಿಷ್ಠ 6 ತಿಂಗಳಾದರೂ ಸಮಯ ಬೇಕು. ಎಲ್ಲಕ್ಕಿಂತ ಮಿಗಿಲಾಗಿ ಯೋಜನೆ ಜಾರಿಯಾಗಿ ಒಂದು ವರ್ಷವಾದರೂ ಕಳೆದಿರಬೇಕು. ಅದು ಬಿಟ್ಟು ಹೀಗೆ ತರಾತುರಿಯಲ್ಲಿ ಹೀಗೆ ಮೂರು ದಿನಗಳಲ್ಲಿ ಸಮೀಕ್ಷೆ ಮಾಡಲು ಹೇಗೆ ಸಾಧ್ಯ? ಎಂದು ವಿವರಿಸಿದರು.

ಕಳೆದ 9 ತಿಂಗಳಿಂದ ರಾಜ್ಯವನ್ನು ಅಭಿವೃದ್ಧಿ ಶೂನ್ಯ ಮಾಡಿರುವ ಕಾಂಗ್ರೆಸ್ ಸರ್ಕಾರ, ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲು ಹೇಗಾದರೂ ಮಾಡಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಸರ್ಟಿಫಿಕೇಟ್ ಪಡೆಯಬೇಕೆಂದು ಹಠಕ್ಕೆ ಬಿದ್ದಿದೆ ಎಂದು ಆರೋಪಿಸಿದರು.

 

Nimma Suddi
";