This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ದೇವರು ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ;- ಸಿ.ಎಂ ಸಿದ್ದರಾಮಯ್ಯ

ದೇವರು ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ;- ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ನಾವು ಖರ್ಚು ಮತ್ತು ಈಗ ವೃಷಭಾವತಿ ಯೋಜನೆ 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದು, ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ ಎಂದರು.

ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ತಿಳಿಸಿದರು.

";