This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ: ವಿಜಯೇಂದ್ರ,ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ: ವಿಜಯೇಂದ್ರ,ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಚುನಾವಣೆ ಬಳಿಕ ಕಾಂಗ್ರೆಸ್​ನ ಗ್ಯಾರಂಟಿಗಳು ನಿಲ್ಲುತ್ತದೆ ಎಂಬ ಬಿಜೆಪಿ-ಜೆಡಿಎಸ್ ಪ್ರಚಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಈ ಹಿನ್ನಲೆ ಬಿಜೆಪಿ, ಜೆಡಿಎಸ್​ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ದೂರು ನೀಡಿದರು.

ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ‌ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್​ ಸುಳ್ಳು ಕರ ಪತ್ರ ಹಂಚುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ‌ ಚುನಾವಣಾ ಆಯೋಗಕ್ಕೆ ಮಾಜಿ ಡಿಸಿಎಂ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ‌ ನಿಯೋಗ ದೂರು ನೀಡಿದೆ. ಈ ವೇಳೆ ಮಾತನಾಡಿದ ಅವರು, ‘ಎಲೆಕ್ಷನ್ ಕಮಿಷನ್ ಅನುಮತಿ ಇಲ್ಲದೆ ಮುದ್ರಣ ಮಾಡಿ ಹಂಚುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೇಲೆ ನಮಗೆ ಅನುಮಾನ ಇದೆ. ಅದರಲ್ಲಿ ಉತ್ತರ ಕ್ಷೇತ್ರದಲ್ಲಿ ಯಾರಿಗೆ ನಿಮ್ಮ ಮತ ಎಂದು ಇದೆ. ಬಿಜೆಪಿ ಅಭ್ಯರ್ಥಿ ಬಗ್ಗೆ ಬೇಸ್ ಲೆಸ್ ಅಲಿಗೇಷನ್ ಮಾಡಿದ್ದಾರೆ. ಮಾಸ್ಟರ್ಸ್ ಮಾಡಿದ್ರೂ, ನಮ್ಮ ಅಭ್ಯರ್ಥಿ ಒಂಬತ್ತನೇ ತರಗತಿ ಎಂದು ಮುದ್ರಿಸಿದ್ದಾರೆ. ತಕ್ಷಣವೇ ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು‌ ಮನವಿ ಮಾಡಿದ್ದೇವೆ ಎಂದರು.

ನಿನ್ನೆಯಷ್ಟೇಕಾಂಗ್ರೆಸ್ ಪ್ರಣಾಳಿಕೆ ಕುರಿತು ‘ಕೈ’ ಪ್ರಣಾಳಿಕೆಯೋ, ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು. ಈ ಬಗ್ಗೆ ಎಫ್ಎಸ್​ಟಿ ತಂಡ ಮಲ್ಲೇಶ್ವರಂ ಠಾಣೆಗೆ ದೂರು ನೀಡಿತ್ತು. ಈ ಹಿನ್ನಲೆ ಆರ್ ಪಿ ಆ್ಯಕ್ಟ್ 125 ಮತ್ತು ಐಪಿಸಿ 153 ಅಡಿಯಲ್ಲಿ ದ್ವೇಷ ಮತ್ತು ಎರಡು ಗುಂಪುಗಳ ನಡುವೆ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಅಧಿಕೃತ ಎಕ್ಸ್​ ಖಾತೆ ಮೇಲೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಅಷ್ಟೇ ಅಲ್ಲ, ಏ.20 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ದ ಎಫ್​ಐಆರ್​ ದಾಖಲಾಗಿತ್ತು. ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ತರುವಂತಹ ಪೋಸ್ಟ್​ ಹಾಕಲಾಗಿತ್ತು. ಹೀಗಾಗಿ ಬಿವೈ ವಿಜಯೇಂದ್ರ ಹಾಗೂ ಖಾತೆ ನಿರ್ವಹಣೆ ಮಾಡುವವರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಮತ್ತೊಂದು ದೂರು ನೀಡಿದೆ.

";