This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Politics News

ಹಬ್ಬದ ಸಂಭ್ರಮಾಚರಣೆ ಸಹಿಸದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಜೆ ಕೊಟ್ಟಿಲ್ಲ: ಆರ್ ಅಶೋಕ್

ಹಬ್ಬದ ಸಂಭ್ರಮಾಚರಣೆ ಸಹಿಸದೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಜೆ ಕೊಟ್ಟಿಲ್ಲ: ಆರ್ ಅಶೋಕ್

ಬೆಂಗಳೂರು:  ಜನರೆಲ್ಲರೂ ಸ್ವಯಂಪ್ರೇರಿತರಾಗಿ ರಾಮ ಮಂದಿರದ ಉದ್ಘಾಟನೆಯ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಈ ಹಬ್ಬದ ವಾತಾವರಣವನ್ನು ಸಹಿಸದ ಕರ್ನಾಟಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರಜೆ ಕೊಡಲು ನಿರಾಕರಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತಾಗಿ ಸೋಮವಾರ ಟ್ವೀಟ್ ಮಾಡಿರುವ ಅವರು‌, “ಕೈ ಹಿಡಿದ ಮಡದಿ ಮಂಡೋದರಿ, ಒಡ ಹುಟ್ಟಿದ ತಮ್ಮ ವಿಭೀಷಣ ರಾಮ ದ್ವೇಷ ಬೇಡ ಎಂದು ಎಷ್ಟೇ ಹೇಳಿದರೂ ಕೇಳದ ರಾವಣನ ಗತಿ ಕಡೆಗೆ ಏನಾಯಿತು?” ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಸೋಮವಾರ ಅರ್ಧ ದಿನದ ರಜೆಯನ್ನು ಘೋಷಿಸಿದೆ. ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ಹಲವು ರಾಜ್ಯಗಳೂ ರಜೆ ಘೋಷಿಸಿವೆ. ಈ ಪಟ್ಟಿಯಲ್ಲಿ ಅಯೋಧ್ಯೆ ರಾಮ ಮಂದಿರ ಇರುವ ಉತ್ತರ ಪ್ರದೇಶ, ಗೋವಾ, ಮಧ್ಯಪ್ರದೇಶ, ಹರಿಯಾಣ, ಛತ್ತೀಸ್‌ಗಢ, ತ್ರಿಪುರಾ, ಒಡಿಶಾ, ಗುಜರಾತ್ ಮತ್ತು ಅಸ್ಸಾಂ ಸೇರಿವೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಸೋಮವಾರ ರಜೆ ನೀಡಬೇಕು ಎಂದು ಕರ್ನಾಟಕದ ಕಾಂಗ್ರೆಸ್‌ ಸರ್ಕಾರವನ್ನು ಬಿಜೆಪಿ ಆಗ್ರಹಿಸಿತ್ತು. ಆದರೆ ಸರ್ಕಾರ ರಜೆ ಘೋಷಣೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

“ಅಧರ್ಮದ ಹಾದಿ ಹಿಡಿದು, ಸ್ವಂತ ದಾಯಾದಿಗಳ ಮೇಲೇ ಯುದ್ಧ ಸಾರಿ, ಶ್ರೀಕೃಷ್ಣನನ್ನು ಎದುರು ಹಾಕಿಕೊಂಡ ದುರ್ಯೋಧನನ ಕಥೆ ಕಡೆಗೆ ಏನಾಯ್ತು?” ಎಂದು ಕಾಂಗ್ರೆಸ್ ನಾಯಕರನ್ನು ಆರ್‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ.ತ್ರೇತಾ ಯುಗದಲ್ಲಿ ರಾವಣನಿಗೆ, ದ್ವಾಪರ ಯುಗದಲ್ಲಿ ದುರ್ಯೋಧನನಿಗೆ ಆದ ಗತಿಯೇ ಕಲಿಯುಗದ ರಾಮ ದ್ವೇಶಿಗಳಿಗೂ ಆಗಲಿದೆ ಎಂದು ಪರೋಕ್ಷವಾಗಿ ಅವರು ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

 

 

Nimma Suddi
";