This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics NewsState News

ಮೈಸೂರು ಮತ್ತು ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ, ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ: ಸಿದ್ದರಾಮಯ್ಯ

ಮೈಸೂರು ಮತ್ತು ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ, ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ: ಸಿದ್ದರಾಮಯ್ಯ

ವರುಣಾ: ಮೈಸೂರು ಮತ್ತು ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಮಿಕವಾಗಿ ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಇದಕ್ಕೆ ನೀವು ಮುಂದಾಗಿ.ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ ಎಂದರು.

ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ ಎಂದು ಇದೇ ಸಂದರ್ಭದಲ್ಲಿ ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ ಎಂದು ವಿವರಿಸಿದರು.

ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ ಎಂದರು.ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು ಎಂದರು.

ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾಗಿದ್ದು, ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಸೂಚಿಸಿದರು.

Nimma Suddi
";