ಬೆಂಗಳೂರು: ಐದು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇ ಆಫ್ಸ್ ರೇಸ್ನಿಂದ ಹೊರಬಿದ್ದಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಐಪಿಎಲ್ 2024 ಟೂರ್ನಿಯಲ್ಲಿ ಸಿಎಸ್ಕೆ ಆಡಿದ ಕಡೇ ಲೀಗ್ ಪಂದ್ಯದಲ್ಲಿ ಗೆದ್ದರೆ ಪ್ಲೇ ಆಫ್ಸ್ ತಲುಪುವ ಅವಕಾಶ ಹೊಂದಿತ್ತು. ಆದರೆ, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 18ರಂದು ನಡೆದ ಪಂದ್ಯದಲ್ಲಿ ಸಿಎಸ್ಕೆ 27 ರನ್ಗಳ ಸೋಲುಂಡು ಸ್ಪರ್ಧೆಯಿಂದ ಹೊರಬಿದ್ದಿತು. ಅಂಕಪಟ್ಟಿಯಲ್ಲಿ 5ನೇ ಸ್ಥಾನದೊಂದಿಗೆ ತನ್ನ ಅಭಿಯಾನ ಅಂತ್ಯಗೊಳಿಸಿತು.
ಎಂಎಸ್ ಧೋನಿ ಟ್ರೋಫಿ ಗೆದ್ದೇ ಐಪಿಎಲ್ ವೃತ್ತಿಬದುಕಿಗೆ ವಿದಾಯ ಹೇಳಬೇಕು. ಹೀಗಾಗಿ ದಿಗ್ಗಜ ಆಟಗಾರ ಸಿಎಸ್ಕೆ ಪರ ಮತ್ತೊಂದು ಆವೃತ್ತಿಯಲ್ಲಿ ಆಡಲೇ ಬೇಕು ಎಂದು ಅಂಬಾಟಿ ರಾಯುಡು ಅಭಿಪ್ರಾಯ ಪಟ್ಟಿದ್ದಾರೆ. ಮಂಡಿ ನೋವಿನ ಗಾಯದ ಸಮಸ್ಯೆಯಿಂದ ಬಳಲಿರುವ ಎಂಎಸ್ ಧೋನಿ, ಐಪಿಎಲ್ 2024 ಟೂರ್ನಿಯಲ್ಲಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಸ್ಥಾನವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಬ್ಯಾಟಿಂಗ್ನಲ್ಲೂ ಸಿಕ್ಕ ಅವಕಾಶಗಳಲ್ಲಿ ಸ್ಪೋಟಕ ಹೊಡೆತಗಳ ಮೂಲಕ ಅಬ್ಬರಿಸಿದ್ದರು.
ಸಿಎಸ್ಕೆ ಮಾಜಿ ನಾಯಕ ಹಾಗೂ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಎಂಎಸ್ ಧೋನಿ ನಿವೃತ್ತಿ ಘೋಷಿಸುತ್ತಾರೆ ಎಂದೇ ಅಂದಾಜಿಸಲಾಗಿದ್ದು, ಕ್ಯಾಪ್ಟನ್ ಕೂಲ್ ಮತ್ತೊಮ್ಮೆ ಮೌನಕ್ಕೆ ಜಾರಿದ್ದು, ಈ ಬಗ್ಗೆ ಮಾತನಾಡಿರುವ ಸಿಎಸ್ಕೆ ತಂಡದ ಮಾಜಿ ದಿಗ್ಗಜ ಬ್ಯಾಟರ್ ಅಂಬಾಟಿ ರಾಯುಡು, 42 ವರ್ಷದ ಎಂಎಸ್ಡಿ ಮತ್ತೊಂದು ಆವೃತ್ತಿ ಆಡುವ ಸಾಧ್ಯತೆ ಇದೆ ಎಂದಿದ್ದಾರೆ.