This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

Politics News

ರೈತರೊಂದಿಗೆ ದೀಪಾವಳಿ ಆಚರಿಸಿದ ಡಿಸಿ

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆ ಜಿಲ್ಲೆ ಸೂಳೇಬಾವಿಯಲ್ಲಿನ ಹುನಗುಂದ ತಾಲೂಕು ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆಗೆ ದೀಪಾವಳಿ ಅಂಗವಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಭೇಟಿ ನೀಡಿ ರೈತರೊಂದಿಗೆ ದೀಪಾವಳಿ ಪೂಜೆಯಲ್ಲಿ ಭಾಗವಹಿಸಿದ್ದರು.

ದೀಪಾವಳಿ ಹಬ್ಬದ ಅಂಗವಾಗಿ ಉತ್ಪಾದಕರ ಸಂಸ್ಥೆಯಲ್ಲಿ ಹಮ್ಮಿಕೊಂಡ ಲಕ್ಷ್ಮೀ ಪೂಜೆ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಜಿಲ್ಲಾಧಿಕಾರಿ ಹಾಗೂ ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಬಿ.ಕೊಂಗವಾಡ ರೈತರ ಸಂಭ್ರಮದಲ್ಲಿ ಭಾಗಿಯಾದರು.

ಅಂದಾಜು ೨ ಗಂಟೆಗಳ ಕಾಲ ರೈತರು ಬೆಳೆಯುವ ಬೆಳೆ, ಮಾರುಕಟ್ಟೆ ವ್ಯವಸ್ಥೆ, ಸರಕಾರದ ಹೊಸ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪ್ರಗತಿಪರ ರೈತ ರವಿ ಸಜ್ಜನರ್ ಅವರ ಪ್ರಯತ್ನದಿಂದ ಈ ಭಾಗದ ರೈತರಿಗೆ ಅನುಕೂಲವಾಗಿದೆ. ನಿಮ್ಮೆಲ್ಲರ ಸಹಕಾರದಿಂದ ಎಫ್‌ಪಿಒಗೆ ಉತ್ತಮ ಹೆಸರು ಬರುತ್ತದೆ. ಜತೆಗೆ ಉತ್ತಮ ಆದಾಯವೂ ನಿಮ್ಮದಾಗುತ್ತದೆ ಎಂದು ಹೇಳಿದರು.

ಪ್ರಗತಿಪರ ರೈತ ರವಿ ಸಜ್ಜನರ, ದೇಶದ ಪ್ರಧಾನಿ ನರೇಂದ್ರ ಮೋದಿ ದೇಶ ಕಾಯುವ ಸೈನಿಕರೊಂದಿಗೆ ದೀಪಾವಳಿ ಆಚರಿಸುತ್ತಾರೆ. ಜಿಲ್ಲೆಯಲ್ಲಿ ನಮ್ಮೆಲ್ಲರ ಹೆಮ್ಮೆಯ ಜಿಲ್ಲಾಧಿಕಾರಿಗಳು ರೈತರೊಂದಿಗೆ ದೀಪಾವಳಿ ಆಚರಿಸಿದ್ದು ರೈತ ಸಮೂಹಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.

ಕೃಷಿ ಇಲಾಖೆ ಉಪನಿರ್ದೇಶಕ ಎಸ್.ವಿ.ಕೊಂಗವಾಡ, ಪಿಕೆಪಿಎಸ್ ಅಧ್ಯಕ್ಷ ಗದಗಯ್ಯ ನಂಜಯ್ಯನಮಠ, ಪಿಡ್ಡಪ್ಪ ಕುರಿ, ಮಹಾಂತೇಶ ಪಾಟೀಲ, ಬಸಪ್ಪ ಕತ್ತಿ, ಆನಂದ ಮೊಕಾಶಿ ಇತರರು ಇದ್ದರು.

Nimma Suddi
";