This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತಾರೆ ಅನ್ನೋದು ನಮಗೆ ಸಂಬಂಧಿಸಿದ ವಿಷಯವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತಾರೆ ಅನ್ನೋದು ನಮಗೆ ಸಂಬಂಧಿಸಿದ ವಿಷಯವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬರುವ ಲೋಕಸಭಾ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ ಒಡೆಯರ್ ಅವರನ್ನು ಅಭ್ಯರ್ಥಿಯಾಗಿ ನಿಲ್ಲಿಸಲು ಬಿಜೆಪಿ ಗಂಭೀರ ಪ್ರಯತ್ನ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು.

ಅವರ ಒಪ್ಪಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ ಮಾರಾಯ್ರೇ. ಅವರು ಸ್ಪರ್ಧಿಸುವ ನಿರ್ಧಾರ ಮಾಡಿದರೆ ಹೇಗೆ ಅಂತ ಇಂದು ಬೆಂಗಳೂರಲ್ಲಿ ಅವರನ್ನು ಕೇಳಿದಾಗ ಅವರು ಅದಕ್ಕೂ ತಮ್ಮ ಪಕ್ಷಕ್ಕೂ ಸಂಬಂಧವಿಲ್ಲವೆನ್ನುವ ರೀತಿಯಲ್ಲಿ ಮಾತಾಡಿದರು.

ಅವರು (ಬಿಜೆಪಿ) ಯಾರನ್ನು ಕಣಕ್ಕಿಳಿಸುತ್ತಾರೆ ಅನ್ನೋದು ತಮಗೆ ಸಂಬಂಧಿಸಿದ ವಿಷಯವಲ್ಲ, ಎದುರಾಳಿ ಯಾರೇ ಆದರೂ ಚಿಂತೆಯಿಲ್ಲ, ತಾವು ತಮ್ಮ ಅಭ್ಯರ್ಥಿ ಮತ್ತು ಕಾರ್ಯಕ್ರಮಗಳೊಂದಿಗೆ ಜನರಲ್ಲಿಗೆ ಹೋಗುವುದಾಗಿ ಹೇಳಿದರು.

ಜನರಿಗೆ ಹತ್ತಿರವಾಗಿರುವ ವ್ಯಕ್ತಿಯನ್ನು ಅಭ್ಯರ್ಥಿಯಾಗಿ ಆರಿಸುತ್ತೇವೆ ಅಂತ ಶಿವಕುಮಾರ್ ಯದುವೀರ್ ಅವರನ್ನು ಟಾರ್ಗೆಟ್ ಮಾಡಿ ಹೇಳಿದ್ರಾ ಅಂತ ಅನಿಸುತ್ತಿದ್ದು, ಯಾಕೆಂದರೆ, ಯದುವೀರ್ ಅವರ ಸಾರ್ವಜನಿಕ ಬದುಕಿನ ಬಗ್ಗೆ ಜನರಿಗೆ ಗೊತ್ತಿಲ್ಲ.

ಅವರು ಸಾಮಾನ್ಯ ಜನರೊಂದಿಗೆ ಇರೋದನ್ನು, ಅವರೊಂದಿಗೆ ಮಾತಾಡುವದನ್ನು ಜನ ನೋಡಿಲ್ಲವೆಂದೇ ಹೇಳಬೇಕು. ದಸರಾ ಸಮಯ ಬಿಟ್ಟರೆ ಅಪರೂಪದ ಸಂದರ್ಭಗಳಲ್ಲಿ ಮಾತ್ರ ಯದುವೀರ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ.

";