This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Education NewsLocal NewsState News

ಶೌರ್ಯ ಘಟಕದ ಸ್ವಯಂ ಸೇವಕರಿಗೆ ರಕ್ಷಣಾ ತರಬೇತಿ

ಶೌರ್ಯ ಘಟಕದ ಸ್ವಯಂ ಸೇವಕರಿಗೆ ರಕ್ಷಣಾ ತರಬೇತಿ

ಹುನಗುಂದ

ಹುನುಗುಂದ ಮತ್ತು ಬಾಗಲಕೋಟೆ ತಾಲೂಕಿನಲ್ಲಿ ಶೌರ್ಯ ಘಟಕದ ಸ್ವಯಂ ಸೇವಕರ ಜೀವನ ರಕ್ಷಣಾ ಕೌಶಲ್ಯ ತರಬೇತಿಯಲ್ಲಿ ಹುನಗುಂದ ತಾಲೂಕಿನ ತಹಶೀಲ್ದಾರಾದ ನಿಂಗಪ್ಪ ಬಿರಾದ‌ರ್ ಉದ್ಘಾಟನೆ ಮಾಡಿದರು, ಮತ್ತು ಅಧ್ಯಕ್ಷತೆಯನ್ನು ಶಂಕ್ರಪ್ಪ ಹೂಗಾರ್ ವಹಿಸಿಕೊಂಡಿದ್ದರು.

ರಕ್ಷಣೆಗೆ ಮಾಡಿಕೊಂಡು ವಿಪತ್ತು ನಿರ್ವಹಣೆ ಮಾಡುವ ಸಲುವಾಗಿಯೇ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಕಾಲಕಾಲಕ್ಕೆ ಸಂಬಂಧಪಟ್ಟ ನುರಿತ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಚನ್ನಕೇಶ ರವರು ಹೇಳಿದರು,

ಅದೇ ಸಂದರ್ಭದಲ್ಲಿ ಸ್ವಯಂ ಸೇವಕರಿಗೆ ಸಮವಸ್ತ್ರ ವನ್ನು ವಿತರಿಸಿದರು.

ತರಬೇತುದಾರರಾದ ಸಂತೋಷ ಪೀಟರ್ ಡಿಸೋಜ ಅವರು, ವಿಪತ್ತು ಎದುರಾದಾಗ ಸನ್ನದ್ದತೆ, ಅಪಾಯ ಗುರುತಿಸುವಿಕೆ, ತಕ್ಷಣದ ಸ್ಪಂದನೆಗೆ ಅಗತ್ಯ ಕ್ರಮಗಳು, ಅಗತ್ಯ ಪರಿಕರಗಳು, ಪ್ರಥಮ ಚಿಕಿತ್ಸಾ ವಿಧಾನಗಳು, ಬೆಂಕಿ ಅವಗಢ ನಿರ್ವಹಣಾ ವಿಧಾನಗಳು, ಅಗ್ನಿ ನಂದಕಗಳ ವಿಧಗಳು, ಅಗ್ನಿ ನಂದಕದ ಬಳಕೆ, ರಸ್ತೆ ಅಪಘಾತದಲ್ಲಿ ಕೈಗೊಳ್ಳುವ ಮುನ್ನೆಚ್ಚರಿಕೆ, ಪ್ರಥಮ ಚಿಕಿತ್ಸೆ, ಅಂಬುಲೆನ್ಸ್ ಕರೆಸುವ ವಿಧಾನ, ಗಾಯಾಳುಗಳನ್ನು ಕೊಂಡೊಯ್ಯುವ ವಿಧಾನ ಇತ್ಯಾದಿ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಹುನಗುಂದ ತಾಲೂಕಿನ ಪಿ.ಎಸ್.ಐ ಪ್ರಕಾಶ್ ಹಾಗೂ ಶೌರ್ಯ ವಿಪತ್ತು ಯೋಜನಾಧಿಕಾರಿಗಳಾದ ಶ್ರೀ ಕಿಶೋರ್ ಕುಮಾರ್, ಜನಜಾಗೃತಿ ಯೋಜನಾಧಿಕಾರಿಗಳಾದ ನಾಗೇಶ್ ವೈ, ಎ, ಕ್ಷೇತ್ರ ಯೋಜನಾಧಿಕಾರಿಗಳಾದ ಸಂತೋಷ,ಮೇಲ್ವಿಚಾರಕಿ ಪವಿತ್ರಾ ಕೃಷಿ ಮೇಲ್ವಿಚಾರಕರು ತಾಲೂಕು ವಿಚಕ್ಷಾಧಿಕಾರಿಗಳು ಹುನಗುಂದ ಬಾಗಲಕೋಟೆ ಶೌರ್ಯ ಘಟಕದ ಕ್ಯಾಪ್ಟನ್ ಘಟಕದ ಸಂಯೋಜಕೀಯರು ಹಾಗೂ ಹುನಗುಂದ ಮತ್ತು ಬಾಗಲಕೋಟ ತಾಲೂಕಿನ ಎಲ್ಲ ಶೌರ್ಯ ಘಟಕದ ಸ್ವಯಂ ಸೇವಕರು ಭಾಗವಹಿಸಿದ್ದರು.

Nimma Suddi
";