This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? : ಕುಮಾರಸ್ವಾಮಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? : ಕುಮಾರಸ್ವಾಮಿ

ಬೆಂಗಳೂರು: ಅಧಿಕಾರ ಇರುವುದು ನಿಮ್ಮ ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೆ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

“ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ?” ಎಂದು ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​​) ನಲ್ಲಿ ಪೋಸ್ಟ್​​ ಮಾಡಿದ್ದಾರೆ.

2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, ₹100 ಕೋಟಿ ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್​ ಸರಕಾರ ಇತ್ತಲ್ಲಾ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ?” ಎಂದು ವಾಗ್ದಾಳಿ ಮಾಡಿದರು.

“ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು?” ಎಂದು ಪ್ರಶ್ನಿಸಿದರು.

 

";