This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕ ಅಮಾನತ್ತು

ನಿಮ್ಮ ಸುದ್ದಿ ಬಾಗಲಕೋಟೆ

ಕಲ್ಲು ಗಣಿ ಮಾಲೀಕರಿಗೆ ಕಿರುಕುಳ ಹಾಗೂ ಲಂಚದ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಫೈಯಾಜ್ ಅಹಮದ್ ಶೇಖ್ ಅವರನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ.

ಬಾಗಲಕೋಟೆಯಲ್ಲಿ ನೂತನ ಸರ್ಕ್ಯೂಟ್ ಹೌಸ್‌ನಲ್ಲಿ ಫೆ.೧೬ ರಂದು ಕ್ರಷರ್ ಮಾಲೀಕರ ಜೊತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಅವರು ಸಭೆ ನಡೆಸಿದ ವೇಳೆ ಉಪನಿರ್ದೇಶಕ ಫೈಯಾಜ್ ಅಹಮದ್ ಶೇಖ್ ಅವರ ವಿರುದ್ಧ ವ್ಯಾಪಕವಾದ ಆರೋಪಗಳು ಕೇಳಿಬಂದಿದ್ದವು. ಸಚಿವರಿಗೆ ಲಿಖಿತ ರೂಪದಲ್ಲಿ ದೂರು ನೀಡಿದ್ದ ಗಣಿ ಮಾಲೀಕರು ಉಪನಿರ್ದೇಶಕ ಫೈಯಾಜ್ ಅಹಮದ್ ಶೇಖ್ ಅವರು ಅನಗತ್ಯವಾಗಿ ಕಿರುಕುಳ ಕೊಡುವುದು, ಹಣ ನೀಡುವಂತೆ ಒತ್ತಾಯಿಸುತ್ತಿದ್ದಾರೆಂದು ಸಚಿವರ ಗಮನಕ್ಕೆ ತಂದಿದ್ದರು. ಈ ದೂರುಗಳನ್ನು ಪರಿಶೀಲಿಸಿದ್ದ ಸಚಿವರು ಮೇಲ್ನೋಟಕ್ಕೆ ಆರೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾತುಪಡಿಸಿದ್ದಾರೆ.

ಕರ್ನಾಟಕ ನಾಗರೀಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ೧೯೫೬ರ ನಿಯಮ ೧೦(೧) (ಡಿ) ಅನ್ವಯ ಗಣಿ ಮತ್ತು ಭೂ ಇಲಾಖೆಯ ನಿರ್ದೇಶಕರಾದ ಬಿ.ಎಸ್.ರಮೇಶ್ ಅವರು ಫೆಬ್ರವರಿ ೧೬ ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.

ಅಮಾನತ್ತಿನಲ್ಲಿರುವ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮ ೯೮ರ ನಿಯಮದಂತೆ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿರುತ್ತಾರೆ, ಈ ವೇಳೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಉಪನಿರ್ದೇಶಕ ಫೈಯಾಜ್ ಅಹಮದ್ ಶೇಖ್ ಅವರಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.