This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದರೂ ಕೂಡ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ಘೋಷಣೆ ಮಾಡಿಲ್ಲ. ಐದು ತಿಂಗಳ ಕಾಲ ಕಾದರೂ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್​ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್​ನ ವಾರದ ರಜೆ ಮುಗಿದ ಬಳಿಕ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುತ್ತಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ರಾಜ್ಯದ ಬರಗಾಲದ ಕುರಿತು ಕಳೆದ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್​ ಅವಧಿಯಲ್ಲಿ ರಾಜ್ಯ ಸರ್ಕಾರ ಅಧ್ಯಯನ ನಡೆಸಿತು. ಅಧ್ಯಯನ ಬಳಿಕ ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ.

ಬಿಜೆಪಿ ನಾಯಕರಿಗೆ ಗೊತ್ತಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನ ಬಗ್ಗೆ ಯಾವುದೇ ದೂಸ್ರಾ ಮಾತು ಇರಲ್ಲ : ಆರ್ ಅಶೋಕ

ಮೊದಲ ಮನವಿ ಕೊಟ್ಟ ಬಳಿಕ, ಒಂದು ವಾರದೊಳಗೆ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಅಧ್ಯಯನ ನಡೆಸಬೇಕು. ಆದರೆ ಕೇಂದ್ರದ ತಂಡ ಅಕ್ಟೋಬರ್ ತಿಂಗಳಲ್ಲಿ‌ ಬಂದಿದ್ದತ್ತು. ಅ.9 ರಿಂದ 14ರ ವರೆಗೆ 10 ಅಧಿಕಾರಿಗಳು ಮೂರು ತಂಡ ಮಾಡಿಕೊಂಡು ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ‌ ತಂಡ ಕೇಂದ್ರ ಸರ್ಕಾರಕ್ಕೆ ವರದಿ‌ ನೀಡಿದೆ. ವರದಿ ನೀಡಿ ಒಂದು ತಿಂಗಳಲ್ಲಿ ಆಯಾ ರಾಜ್ಯಗಳಿಗೆ ಪರಿಹಾರ ಕೊಡಬೇಕು. ಬರ ಪರಿಹಾರವನ್ನು ಕೇಂದ್ರ ಸರ್ಕಾರ ಶೇ.75ರಷ್ಟು ಮತ್ತು ರಾಜ್ಯ ಸರ್ಕಾರ ಶೇ.25ರಷ್ಟು ನೀಡುತ್ತದೆ ಎಂದು ತಿಳಿಸಿದ್ದಾರೆ.

ಇದರಲ್ಲಿ 196 ತಾಲೂಕುಗಳು ತೀವ್ರ ಬರಗಾಲದಿಂದ ಕೂಡಿವೆ. ಬರಗಾಲದಿಂದ 48 ಲಕ್ಷ ಹೆಕ್ಟೇರ್ ಪ್ರದೇಶ ಕೃಷಿ, ತೋಟಗಾರಿಕೆ ಬೆಳೆ ನಷ್ಟ ಆಗಿದೆ. ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ 2023ರ ಸೆಪ್ಟೆಂಬರ್​ 23, ನವೆಂಬರ್​ 15 ಮತ್ತು ಅಕ್ಟೋಬರ್​​ 20 ಎಂದು ಮೂರು ಬಾರಿ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

 

Nimma Suddi
";