This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ: ದಿನೇಶ್ ಗುಂಡೂರಾವ್

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ: ದಿನೇಶ್ ಗುಂಡೂರಾವ್

ಮಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಹಾಗೂ ತನಿಖೆ ಶುರುವಾಗಿದೆ ಎಂದು ತಿಳಿಸಿದರು.

ಬಾಂಬ್ ಇಟ್ಟವರು ಯಾರು ಅವರ ಉದ್ದೇಶ ಏನಾಗಿತ್ತು ಮೊದಲಾದ ಸಂಗತಿಗಳು ಗೊತ್ತಾದ ಮೇಲೆ ವಿಷಯದ ಬಗ್ಗೆ ಸ್ಪಷ್ಟವಾದ ವಿವರಣೆ ನೀಡಬಹುದು. ಆದರೆ, ತನಿಖೆ ಪೂರ್ಣಗೊಳ್ಳುವ ಮೊದಲು, ಅಪರಾಧಿ ಯಾರು ಅನ್ನೋದು ಗೊತ್ತಾಗುವ ಮೊದಲೇ ನಮಗೆ ತೋಚಿದ್ದನ್ನು ಹೇಳೋದು, ಬರೆಯೋದು, ಮಾಧ್ಯಮಗಳಲ್ಲಿ ತೋರಿಸುವುದು ಸರಿಯಲ್ಲ ಎಂದು ಹೇಳಿದರು.

ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಕೂಗಿದ ಪ್ರಕರಣದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಅರ್ ಅಶೋಕ ನೀಡುತ್ತಿರುವ ಹೇಳಿಕೆಗಳಿಗೆ ಉತ್ತರಿಸಿದ ಸಚಿವ, ಆರೋಪಗಳನ್ನು ಮಾಡೋದು ಬಿಜೆಪಿ ನಾಯಕರಿಗೆ ಅಭ್ಯಾಸವಾಗಿದೆ, ಎಫ್ ಎಸ್ ಎಲ್ ವರದಿ ಬಂದ ಬಳಿಕ ಎಲ್ಲವೂ ಸ್ಪಷ್ಟವಾಗುತ್ತದೆ, ಪಾಕ್ ಪರ ಕೂಗಿದ್ದರೆ ಅವರ ಪರ ಯಾರೂ ನಿಲ್ಲಲ್ಲ, ಈಗಾಗಲೇ ಹಲವಾರು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸೂಚಿಸಿದರು.

Nimma Suddi
";