This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Politics NewsState News

ಶೃಂಗೇರಿ: ಬೆಂಗಳೂರು ಗ್ರಾಮಾಂತರದ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಶಿವಕುಮಾರ್,

ಶೃಂಗೇರಿ: ಬೆಂಗಳೂರು ಗ್ರಾಮಾಂತರದ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಶಿವಕುಮಾರ್,

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಗ್ಗೆ ಏನೂ ಮಾತನಾಡುವುದಿಲ್ಲ. ಇಡೀ ರಾಜ್ಯದ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಶೃಂಗೇರಿಯಲ್ಲಿ ಮಾತನಾಡಿದ ಅವರು, ನಾನು ರಾಜ್ಯದ ವಿಚಾರ ಮಾತನಾಡುತ್ತೇನೆ, ಗ್ರಾಮಾಂತರದ ಬಗ್ಗೆ ಮಾತಾಡುವುದಿಲ್ಲ. ಗ್ರಾಮಾಂತರದಲ್ಲಿ ದೇವೇಗೌಡರ ಸೊಸೆ ಇದ್ದಾಗಲೂ ಇದೇ ಪರಿಸ್ಥಿತಿ ಇತ್ತು. ಅಂದಿಗೂ ಇಂದಿಗೂ ಬಹಳ ವ್ಯತ್ಯಾಸವಿದೆ ಎಂದರು.

ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹಾಕುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಅದು ಅವರ ಪಕ್ಷದ ವಿಚಾರ. ಅವರ ಆಯ್ಕೆ. ಮಂಡ್ಯ, ಬೆಂಗಳೂರು, ಗ್ರಾಮಾಂತರ ಚಿಕ್ಕಬಳ್ಳಾಪುರ ಹಾಸನ ಎಲ್ಲಿಯಾದರೂ ಸ್ಪರ್ಧೆ ಮಾಡಲಿ. 2 ಪಾರ್ಟಿ ಸೇರಿ ತೀರ್ಮಾನ ಮಾಡಿದ್ದಾರೆ. ಅವರಿಗೆ ಅನುಕೂಲವಾಗುವ ಕಡೆ ನಿಲ್ಲಲಿ. ಈಗ ನಾವ್ಯಾಕೆ ಅದರ ಬಗ್ಗೆ ಮಾತನಾಡಬೇಕು. ಮೊದಲಿಂದ ನಾವು ಹೇಗೆ ನಡೆದುಕೊಂಡಿರುತ್ತೇಯೋ ಅದರ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಪ್ರತಿ ಪಂಚಾಯಿತಿಗೆ ಸದಸ್ಯನಾಗಿದ್ದಂತೆ ಸುರೇಶ್ ಸೇವೆ ಮಾಡುತ್ತಿದ್ದಾರೆ. ಸುರೇಶ್ ಬಗ್ಗೆ ಕ್ಷೇತ್ರದ ಪ್ರತಿ ಮನೆಗೂ ಗೊತ್ತು. ಜನ ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದರು.

‘ಮೋದಿ ಮೋದಿ’ ಎಂಬ ಘೋಷಣೆ ಕೂಗುವ ಯುವಕರ ಕೆನ್ನೆಗೆ ಬಾರಿಸಬೇಕು ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆಯನ್ನು ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ನಾಡ ಭಾಷೆಯಲ್ಲಿ ತಂಗಡಗಿ ಮಾತನಾಡಿದ್ದಾರೆ ಅಷ್ಟೇ. ಅದೇನು ದೊಡ್ಡದಲ್ಲ. ತಂಗಡಗಿಯನ್ನ ಲೀಡರ್ ಮಾಡುತ್ತಿದ್ದಾರೆ ಬಿಜೆಪಿಯವರು, ಮಾಡಲಿ ಎಂದು ವಿವರಿಸಿದರು.

Nimma Suddi
";