This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ನನ್ನ 92ನೇ ವಯಸ್ಸಿನಲ್ಲೂ ನಾನು ಸತ್ಯವನ್ನೇ ಹೇಳುತ್ತಿದ್ದೇನೆ: ಹೆಚ್​​ಡಿ ದೇವೇಗೌಡ

ನನ್ನ 92ನೇ ವಯಸ್ಸಿನಲ್ಲೂ ನಾನು ಸತ್ಯವನ್ನೇ ಹೇಳುತ್ತಿದ್ದೇನೆ: ಹೆಚ್​​ಡಿ ದೇವೇಗೌಡDeve Gowda

ಚಿಕ್ಕಮಗಳೂರು: ಸಿದ್ದರಾಮಯ್ಯ ಬಗ್ಗೆ ಹುಷಾರು ಅಂತಾ ರಾಮಕೃಷ್ಣ ಹೆಗಡೆ ಅವತ್ತೆ ಹೇಳಿದ್ದರು. ಅವರ ಮಾತು ಕೇಳದೆ ಸಿದ್ದರಾಮಯ್ಯಗೆ ಅವಕಾಶ ನೀಡಿದ್ದು, ನನ್ನ 92ನೇ ವಯಸ್ಸಿನಲ್ಲೂ ನಾನು ಸತ್ಯವನ್ನೇ ಹೇಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ತಿಳಿಸಿದರು.

ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನೂ ಬದುಕಿದ್ದು, ಅವರನ್ನೇ ಕೇಳಿ ಎಂದು ಹೇಳಿದ್ದು, ತನ್ನದೇ ಸಮಾಜದವರನ್ನು ಸಿದ್ದರಾಮಯ್ಯ ಬೆಳೆಯಲು ಬಿಡಲಿಲ್ಲ. ದೇವೇಗೌಡರ ಆಪ್ತರೆಂಬ ಕಾರಣಕ್ಕೆ ಹಲವರನ್ನು ಮಂತ್ರಿ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದ್ದು,
ಮೋದಿ ಅವರನ್ನು ಬಿಟ್ಟು ಯಾವುದೇ ಒಬ್ಬ ವ್ಯಕ್ತಿ ಅವರ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ. ಈ ದೇಶದ ಅತ್ಯಂತ ಎತ್ತರಕ್ಕೆ ಬೆಳೆದಂತಹ ರಾಜಕಾರಣಿ ಮೋದಿ. ಕೆಲವು ಪತ್ರಿಕೆಗಳಲ್ಲಿ 18 ಇನ್ನೂ ಕೆಲವು ಪತ್ರಿಕೆಗಳಲ್ಲಿ 24 ಫೀಟ್ ಗೆಲ್ಲುತ್ತೆವೆ ಎಂದರು.

ಸುಮ್ಮನೆ ಮನಸ್ಸಿಗೆ ಬಂದ ಹಾಗೆ ಮಾತನಾಡುತ್ತಾರೆ. ಜನ ಮೆಚ್ಚಬೇಕಲ್ಲ ಎಂದಿದ್ದು, ಮೋದಿ ದೇಶದ ಸರ್ವೋಚ್ಚ ನಾಯಕ. ಅವರ ಸಮಾನವಾಗಿ ಯಾವ ನಾಯಕನು ದೇಶದಲ್ಲಿ ಇಲ್ಲ. INDIA ಕೂಟದಲ್ಲಿ ಮೋದಿ ಸಮಕ್ಕೆ ಯಾರು ಇಲ್ಲ. ಒಂದೊಂದು ಚಾನೆಲ್ನಲ್ಲಿ ಒಂದೊಂದು ಸಮೀಕ್ಷೆ ಬರುತ್ತಿದೆ. ಇದಕ್ಕೆಲ್ಲ ಯಾರು ತಲೆಕೆಡಿಸಿಕೊಳ್ಳಬೇಕಿಲ್ಲ. ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಪತ್ರಿಕೆಯಲ್ಲಿ ನೋಡಿದೆ ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇನೆ ಎಂದು ತಿಳಿಸಿದರು.

ಹಿಂದೆಯೇ ಕುಮಾರಸ್ವಾಮಿ 26 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದರು.ಹಾಸನ ಲೋಕಸಭಾ ಕ್ಷೇತ್ರ ಗೆಲುವಿಗೆ ಹೆಚ್​ಡಿ ದೇವೇಗೌಡ ರಾಜಕೀಯ ತಂತ್ರ ರೂಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ತ ದಿ.ಕೆಂಪರಾಜು ಪುತ್ರ ಜೆಡಿಎಸ್ ಸೇರ್ಪಡೆ ಆಗಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಶಾಸಕ ಶ್ರೀನಿವಾಸ್ ಅಳಿಯ ಚೇತನ್ ಕೆಂಪರಾಜು ಮನೆಗೆ ಹೆಚ್​ಡಿ ದೇವೇಗೌಡ ಭೇಟಿ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";