This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಲೋಕಸಭಾ ಚುನಾವಣಾ ಪ್ರಚಾರದಿಂದ ಸುಸ್ತಾದ ಸಿದ್ದು, 3 ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ

ಲೋಕಸಭಾ ಚುನಾವಣಾ ಪ್ರಚಾರದಿಂದ ಸುಸ್ತಾದ ಸಿದ್ದು, 3 ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡು ಹಂತದಲ್ಲಿ ಪ್ರಚಾರ ನಡೆಸಿ ಸುಸ್ತಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯ ವಿಶ್ರಾಂತಿ ಮೂಡ್‌ಗೆ ಜಾರಿದ್ದಾರೆ. ಮಂಗಳವಾರದಿಂದ ಅವರು ಮೂರು ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ರಾಜ್ಯದಲ್ಲಿ ಎರಡನೇ ಹಂತದ ಚುನಾವಣಾ ಪ್ರಚಾರಕ್ಕೆ ಇದೀಗ ತೆರೆಬಿದ್ದಿದೆ‌. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರಿ ನಿವಾಸದಲ್ಲಿ ಸಿಎಂ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.

ಇನ್ನು ಮಂಗಳವಾರ ಅವರು ಊಟಿಗೆ ತೆರಳಲಿದ್ದಾರೆ. ಊಟಿಯಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಹಸಿರಿನ ವಾತಾವರಣದಿಂದ ಕೂಡಿರುವ ಊಟಿಯಲ್ಲಿ ಸದ್ಯ ರಾಜ್ಯದಲ್ಲಿ ಇರುವಷ್ಟು ಬಿಸಿ ವಾತಾವರಣ ಇಲ್ಲ. ಹೀಗಾಗಿ ಆಪ್ತರ ಸಲಹೆಯ ಮೇರೆಗೆ ಅವರು ಊಟಿಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯಗೆ ಆಪ್ತರು ಊಟಿ ಪ್ರವಾಸದ ಸಂದರ್ಭದಲ್ಲಿ ಸಾಥ್ ನೀಡುವ ಸಾಧ್ಯತೆ ಇದೆ. ಊಟಿಯಲ್ಲಿ ಸಿಎಂ ಜೊತೆಗೆ ಅವರೂ ಕಾಲ ಕಳೆಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಬಿಸಿಲ ಧಗೆಯ ನಡೆವೆಯೂ ಸಿಎಂ ಸಿದ್ದರಾಮಯ್ಯ ಎರಡು ಹಂತದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಬಹಿರಂಗ ಪ್ರಚಾರ ಸಭೆ, ರೋಡ್ ಶೋನಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು.

";