This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Agriculture NewsState News

ರಾಜ್ಯ ಸರಕಾರದ ಆದೇಶ: ಬೆಳೆ ನಷ್ಟ ಪರಿಹಾರ ವಿತರಣೆ, ಯಾವುದಕ್ಕೆ ಎಷ್ಟು ಪರಿಹಾರ? ಎಂಬುವುದನ್ನು ಕಂಡುಕೊಳ್ಳಿ

ರಾಜ್ಯ ಸರಕಾರದ ಆದೇಶ: ಬೆಳೆ ನಷ್ಟ ಪರಿಹಾರ ವಿತರಣೆ, ಯಾವುದಕ್ಕೆ ಎಷ್ಟು ಪರಿಹಾರ? ಎಂಬುವುದನ್ನು ಕಂಡುಕೊಳ್ಳಿ

ಬೆಂಗಳೂರು: ಕೇಂದ್ರ ಸರಕಾರ ಎನ್‌ಡಿಆರ್‌ಎಫ್‌ ನಿಂದ ಬಿಡುಗಡೆ ಮಾಡಿರುವ 3,454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ವಿತರಿಸುವ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಬಿಡುಗಡೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲು ಅದೇಶಿಸಲಾಗಿದೆ.

ಹಣ ಬಿಡುಗಡೆ ಜತೆಗೆ, ಕೆಲವೊಂದು ಮಾರ್ಗಸೂಚಿಗಳನ್ನೂ ನೀಡಲಾಗಿದೆ. ಅರ್ಹ ಫಲಾನುಭವಿ ರೈತರಿಗೆ ಈಗಾಗಲೇ ಪಾವತಿಯಾಗಿರುವ ಬೆಳೆ ಹಾನಿ ಪರಿಹಾರದ ವಿವರ ಹಾಗೂ ನಿಯಮಾನುಸಾರ ಪ್ರಸ್ತುತ ಪಾವತಿಸುವ ಮೊತ್ತದ ವಿವರಗಳನ್ನು ಡಿಸಿ, ಎಸಿ, ತಹಸೀಲ್ದಾರ್‌ ಕಚೇರಿಗಳು ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಬೇಕು.

ಯಾವ ಬೆಳೆಗೆ ಎಷ್ಟು ಪರಿಹಾರ?

ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್‌ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿ ಮಾಡಲಾಗಿದೆ.

ಮಳೆಯಾಶ್ರಿತ ಬೆಳೆಗೆ – 8,500 ರೂ.
ನೀರಾವರಿ ಪ್ರದೇಶದ ಬೆಳೆ – 17,000 ರೂ.
ದೀರ್ಘಾವಧಿ (ತೋಟಗಾರಿಕೆ) ಬೆಳೆ – 22,500 ರೂ.
ಆಯಾ ಜಿಲ್ಲಾಧಿಕಾರಿಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಅಗತ್ಯ ಮಾಹಿತಿ ನೀಡಲು ಡಿಸಿ, ಎಸಿ ಮತ್ತು ತಹಶೀಲ್ದಾರ್‌ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ಗಳನ್ನು ತೆರೆಯಲು ಕೂಡ ರಾಜ್ಯ ಸರಕಾರದಿಂದ ನಿರ್ದೇಶನ ನೀಡಲಾಗಿದೆ.

ರಾಜ್ಯ ಸರಕಾರ ಕಳೆದ ಜನವರಿಯಲ್ಲಿ ರೈತರಿಗೆ ಗರಿಷ್ಠ 2 ಸಾವಿರ ರೂ.ವರೆಗೆ ಮಧ್ಯಂತರ ಪರಿಹಾರ ಪಾವತಿಸಿದೆ. ಈಗ ಆ ಮೊತ್ತ ಕಡಿತ ಮಾಡಿಕೊಂಡು ಎಸ್‌ಡಿಆರ್‌ಎಫ್‌ (ರಾಜ್ಯ ವಿಪತ್ತು ನಿರ್ವಹಣಾ ನಿಧಿ) ಮಾರ್ಗಸೂಚಿ ಅನ್ವಯ ನಿಗದಿಯಾದ ಬಾಕಿ ಮೊತ್ತ ಜಮಾ ಮಾಡಲು ಸೂಚಿಸಲಾಗಿದೆ.

ರಾಜ್ಯದ 223 ಬರಪೀಡಿತ ತಾಲೂಕುಗಳ ಒಟ್ಟು 33,55,599 ರೈತರಿಗೆ 636.44 ಕೋಟಿ ರೂ. ಅನ್ನು ರಾಜ್ಯ ಸರಕಾರ ಕಳೆದ ಜನವರಿ 22ರಂದು ಮಧ್ಯಂತರ ಪರಿಹಾರವಾಗಿ ಬಿಡುಗಡೆ ಮಾಡಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

Nimma Suddi
";